ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ದಸರಾ ನಾಡಹಬ್ಬವನ್ನು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ದೀಪಬೆಳಗಿಸುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ತಂಗಮಣಿ ಎಂ. ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ನೌಕರ ಸಂಘದ ಕಾರ್ಯದರ್ಶಿ ಲತಾ ಟೀಚರ್, ಸರ್ವಮಂಗಳ ಟೀಚರ್ ಶುಭಾಶಂಸನೆಗೈದರು. ಕವಿತಾ ರಚನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕೆದಿಲಾಯ ಪ್ರತಿಷ್ಠಾನದ ವತಿಯಿಂದ ಬಹುಮಾನಗಳನ್ನು ನೀಡಲಾಯಿತು. ಸಭಾಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು. ಅಧ್ಯಾಪಕರುಗಳಾದ ನಿರಂಜನ ರೈ ಪೆರಡಾಲ ಸ್ವಾಗತಿಸಿ, ಸುಶೀಲ ಪದ್ಯಾಣ ವಂದಿಸಿದರು. ವಿದ್ಯಾರಂಗ ಕಲಾಸಾಹಿತ್ಯ ವೇದಿಕೆಯ ಸಂಚಾಲಕಿ ಅಧ್ಯಾಪಿಕೆ ಪ್ರಭಾವತಿ ಕೆದಿಲಾಯ ಪುಂಡೂರು ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು. ಮಕ್ಕಳ ಕವಿಗೋಷ್ಠಿ ನಡೆಯಿತು.


