HEALTH TIPS

ಸರ್ಕಾರ ರಚಿಸುವಂತೆ ದೇವೇಂದ್ರ ಫಡ್ನವಿಸ್ ಗೆ ಆಹ್ವಾನ ನೀಡಿದ ಮಹಾ ರಾಜ್ಯಪಾಲರು


      ಮುಂಬೈ: ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.
    ಏಕೈಕ ದೊಡ್ಡ ಪಕ್ಷ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ಆಹ್ವಾನ ನೀಡಿರುವುದಾಗಿ ರಾಜಭವನ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ಅಕ್ಟೋಬರ್ ೨೧ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಅಕ್ಟೋಬರ್ ೨೪ರಂದು ಫಲಿತಾಂಶ ಪ್ರಕಟಗೊಂಡಿದ್ದು, ೧೫ ದಿನ ಕಳೆದರೂ ಯಾವುದೇ ಪಕ್ಷ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಲಿಲ್ಲ.
     ಈ ಮಧ್ಯೆ ಹಾಲಿ ವಿಧಾನಸಭೆಯ ಅವಧಿ ನಿನ್ನೆ  ಅಂತ್ಯಗೊAಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಬದಲು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸ್ವಸಾಮರ್ಥ್ಯದ ಮೇಲೆ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲರು ಬಿಜೆಪಿ ಆಹ್ವಾನ ನೀಡಿದ್ದು, ಸರ್ಕಾರ ರಚನೆ ಬಳಿಕ ಬಹುಮತ ಸಾಬೀತು ಪಡಿಸಬೇಕಾಗುತ್ತದೆ.
      ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೂ ಸರ್ಕಾರ ರಚನೆಗೆ ಬೇಕಾಗಿರುವ ಬಹುಮತವನ್ನು ಪಡೆದಿದ್ದರೂ ಶಿವಸೇನೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯ ಬೇಡಿಕೆ ಇಟ್ಟಿದೆ. ಆದರೆ, ಸಿಎಂ ಸ್ಥಾನವನ್ನು ಸುತಾರಾಂ ಬಿಟ್ಟುಕೊಡುವುದಿಲ್ಲ ಎಂದು ಬಿಜೆಪಿ ಪಟ್ಟುಹಿಡಿದಿರುವುದರಿಂದ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿದೆ. ಇನ್ನು ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಕೂಡ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries