HEALTH TIPS

ಕಾಶ್ಮೀರ ಸಂಪೂರ್ಣ ಸ್ಥಗಿತ ಆರೋಪ ತಪ್ಪು, ಅಪ್ರಸ್ತುತ: ಸುಪ್ರೀಂಗೆ ಕೇಂದ್ರ

     
     ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ವಿಧಿಸಲಾಗಿದ್ದ ಕೆಲವು ನಿಬರ್ಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ಕಾಶ್ಮೀರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂಬ ಆರೋಪ ತಪ್ಪು ಮತ್ತು ಅಪ್ರಸ್ತುತ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
   ಕಾಶ್ಮೀರದಲ್ಲಿ ವಿಧಿಸಲಾಗಿರುವ  ನಿಬರ್ಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ವೇಳೆ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪರವಾಗಿ ವಾದ ಮಂಡಿಸಿದ ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ವಿಧಿಸಿದ ಕೆಲವು ನಿಬರ್ಂಧಗಳನ್ನು ಸಮರ್ಥಿಸಿಕೊಂಡಿರು.ಅರ್ಜಿದಾರರು ಆರೋಪಿಸಿದಂತೆ ಕಾಶ್ಮೀರ ಸಂಪೂರ್ಣ ಸ್ಥಗಿತಗೊಂಡಿಲ್ಲ. ಆಗಸ್ಟ್ 13ರ ನಂತರ ಕೆಲವು ನಿಬರ್ಂಧಗಳನ್ನು ಹಿಂಪಡೆಯಲಾಗಿದೆ ಎಂದು ಮೆಹ್ತಾ ಅವರು ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಪೀಠಕ್ಕೆ ತಿಳಿಸಿದರು.370ನೇ ವಿಧಿ ರದ್ದುಗೊಳಿಸುವ ಮುನ್ನ ಕಾಶ್ಮೀರದಲ್ಲಿ ಕೇಂದ್ರದ ಕೆಲವು ಕಾನೂನುಗಳು ಅನ್ವಯವಾಗುತ್ತಿರಲಿಲ್ಲ. ಮಾಹಿತಿ ಪಡೆಯುವ ಹಕ್ಕು ಇರಲಿಲ್ಲ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯವಾಗುತ್ತಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿದ ಬಳಿಕ ಈಗ ಎಲ್ಲವೂ ಅನ್ವಯವಾಗುತ್ತಿದೆ ಎಂದು ತುಷಾರ್ ಮೆಹ್ತಾ ವಿವರಿಸಿದರು.
    ಅಕ್ಟೋಬರ್ 14ರಿಂದ ಕಾಶ್ಮೀರದಲ್ಲಿ ಪೆÇೀಸ್ಟ್ ಪೇಡ್ ಮೊಬೈಲ್ ಸೇವೆ ಆರಂಭಿಸಲಾಗಿದೆ. ಶಾಲೆಗಳು ಪುನಾಂರಭವಾಗಿವೆ. ನ್ಯಾಯಾಲಯ, ಆರೋಗ್ಯ ಕೇಂದ್ರ, ಬ್ಯಾಂಕ್, ಮಾಧ್ಯಮ ಸಂಸ್ಥೆಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿವೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries