HEALTH TIPS

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ: ರಾಷ್ಟ್ರಪತಿ, ಪ್ರಧಾನಿಗಳಿಂದ ನಮನ

   
   ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿತು.
     ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ್ ಅಟಲ್ ಸ್ಮಾರಕ ಬಳಿ ತೆರಳಿ ಅಗಲಿದ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿಯನ್ನು ಸ್ಮರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ವತಿಯಿಂದ ಸ್ಮಾರಕ ಬಳಿ ಭಜನೆ, ಗೀತ ಗಾಯನ ಕಾರ್ಯಕ್ರಮ ನಡೆದಿದೆ.
    ನಿನ್ನೆ  ಪ್ರಧಾನಿ ಮೋದಿ ಲಕ್ನೊದ ಲೋಕ ಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ರಾಜಕೀಯ ಜೀವನ ಕಂಡುಕೊಂಡಿದ್ದು ಲಕ್ನೊ ಲೋಕಸಭಾ ಕ್ಷೇತ್ರದಿಂದಲೇ. 1991, 1998, 1999 ಮತ್ತು 2004ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಬಂದಿದ್ದರು.
ಈ ಹಿನ್ನಲೆಯಲ್ಲಿ ಅವರ ಸ್ಮರಣಾರ್ಥ ಇಲ್ಲಿ ವಾಜಪೇಯಿ ಪ್ರತಿಮೆ ಅನಾವರಣಗೊಳ್ಳಲಿದೆ. ಸಮಾರಂಭ ನಡೆಯುವ ಸ್ಥಳ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವುದರಿಂದ ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ವಿಶೇಷ ಭದ್ರತೆ ಒದಗಿಸಲಾಗಿತ್ತು.
    ಇದೇ ಸಂದರ್ಭದಲ್ಲಿ ಮೋದಿಯವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries