HEALTH TIPS

ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಿ-ಶಾಂತಾ ಎಸ್.ಭಟ್


    ಬದಿಯಡ್ಕ: ವಿದ್ಯಾರ್ಥಿಗಳು ಪುಸ್ತಕ ಜ್ಞಾನಕ್ಕೆ ಸೀಮಿತಗೊಳ್ಳದೆ, ಸುತ್ತು ಮುತ್ತಲಿನ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕುಂಬ್ಡಾಜೆ ಗ್ರಾ.ಪಂ.ಸದಸ್ಯೆ, ಶಿಬಿರದ ಸಂಯೋಜಕ ಸಮಿತಿಯ ಅಧ್ಯಕ್ಷೆ ಶಾಂತ ಎಸ್. ಭಟ್ ಹೇಳಿದರು.
      ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯುತ್ತಿರುವ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ರಸ್ತೆ ಬದಿಯ ಕಾಡುಪೆÇದೆಗಳನ್ನು ಕಡಿಯುವ ಮುಖಾಂತರ ಉದ್ಘಾಟಿಸಿ ಮಾತನಾಡಿದರು.
     ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯ ಹಮ್ಮಿಕೊಳ್ಳುವ ಮುಖಾಂತರ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ಸಾರಿ ಹೇಳಿದ್ದಾರೆ. ಇದೇ ರೀತಿ ಸ್ವಚ್ಛ ಮಾಡುತ್ತಿರಲು ಬೇರೆ ಯಾರಾದರೂ ಬರಬೇಕೆಂದಿಲ್ಲ, ಸ್ವಚ್ಛವಾಗಿಯೇ ಉಳಿಸುವ ಕಾರ್ಯ ಸ್ಥಳೀಯರದ್ದು ಹಾಗೂ ಸಾರ್ವಜನಿಕರದ್ದು ಎಂದರು.
     ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ. ಎಂ. ಮಾತನಾಡಿ, ಪರಿಸರವನ್ನು ಸ್ವಚ್ಛವಾಗಿ ಇರಿಸುವುದು ಪ್ರತಿಯೊಬ್ಬನ ಕರ್ತವ್ಯ. ತ್ಯಾಜ್ಯ ಎಸೆಯಲಾರೆ, ಪರಿಸರ ಮಲಿನ ಮಾಡಲಾರೆ ಎಂಬ ದೃಢ ತೀರ್ಮಾನ ಪ್ರತಿಯೊಬ್ಬನೂ ಸ್ವೀಕರಿದರೆ ಶುಚೀಕರಣ ಹಮ್ಮಿಕೊಳ್ಳಬೇಕಾದ ಆವಶ್ಯಕತೆಯೇ ಇಲ್ಲ ಎಂದರು.
    ಅಗಲ್ಪಾಡಿ ಶಾಲೆಯಿಂದ ಮಾರ್ಪನಡ್ಕ ಪೇಟೆಯ ವರೆಗೆ ರಸ್ತೆ ಬದಿ ಶುಚೀಕರಣ ಹಾಗೂ ಚರಂಡಿ ನಿರ್ಮಾಣ ನಡೆಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ್ ಖಂಡಿಗೆ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತ, ವಾಣಿಜ್ಯ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಕಾವ್ಯ, ಅಂಜನಾ, ಜಗತ್, ಅಜಿತ್, ಅಭಿಲಾಶ್ ಮಾರ್ಗದರ್ಶನ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries