HEALTH TIPS

ಮಂಗಳೂರು: ಪೆÇಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆದಾಗ ಅನಿವಾರ್ಯವಾಗಿ ಬಲಪ್ರಯೋಗ- ಡಾ. ಪಿ. ಎಸ್. ಹರ್ಷ

 
     ಮಂಗಳೂರು : ಪೆÇಲೀಸ್ ಠಾಣೆ ಮೆಲೆ ದಾಳಿ ನಡೆಸಿ ಪೆÇಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗ ಅನಿವಾರ್ಯವಾಗಿ ಬಲಪ್ರಯೋಗ ಮಾಡಲಾಯಿತು. ಇದರಿಂದ ಇಬ್ಬರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೆÇಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.
   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ತಹಬದಿಗೆ ತರುವ ಉದ್ದೇಶದಿಂದ ನಗರದ ಕೇಂದ್ರ ಭಾಗದ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೂ ಕಫ್ರ್ಯೂ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಗೆ ಬರಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೆÇಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
    ಪ್ರತಿಭಟನಾಕಾರರ ಹಿಂಸಾಚಾರದಿಂದ 20ಕ್ಕೂ ಅಧಿಕ ಮಂದಿ ಪೆÇಲೀಸರಿಗೆ ತೀವ್ರ ಗಾಯಗಳಾಗಿವೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಕೈಗೆ ತುಂಡಾಗಿದ್ದು, ಅಪರಾಧ ವಿಭಾಗದ ಡಿಸಿಪಿ ಅವರ ಕಾಲಿಗೆ ತೀವ್ರವಾದ ಗಾಯಗಳಾಗಿದೆ. ಪೆÇಲೀಸ್ ಠಾಣೆ ಮೇಲೆ ಉದ್ರಿಕ್ತ ಗುಂಪು ದಾಳಿ ನಡೆಸಿ ಅವರ ಹತ್ಯೆಗೆ ಮುಂದಾದಾಗ ಅನಿವಾರ್ಯವಾಗಿ ಪೆÇಲೀಸರು ಬಲಪ್ರಯೋಗ ಮಾಡಿದರು ಎಂದು ಸಮರ್ಥಿಸಿಕೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries