ಕುಂಬಳೆ: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೃಇಸುವ ನಿಟ್ಟಿನಲ್ಲಿ ಅಗತ್ಯದ ಕ್ರಮಗಳಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಒತ್ತಡ ಹೇರಬೇಕೆಂದು ಮತ್ತು ಜಿಲ್ಲೆಯ ತುಳು ಭಾಷಾ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಮದು ಆಗ್ರಹಿಸಿ ಜಿಲ್ಲೆಗೆ ಮಂಗಳವಾರ ಆಗಮಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇರಳ ತುಳು ಅಕಾಡೆಮಿ ವತಿಯಿಂದ ಮನವಿ ಸಲ್ಲಿಸಲಾಯಿತು.
ತುಳು ಅಕಾಡೆಮಿಯು ಇತ್ತೀಚೆಗೆ ಬಿಡುಗಡೆಗೊಳಿಸಿದ ತುಳು ಲಿಪಿ ಪುಸ್ತಕ ಬರವುದ ಬಿದೆ ಪುಸ್ತಕವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು. ತುಳು ಭಾಷೆಯನ್ನು ಎಲ್ಲಾ ಭಾಷಿಕರಿಗೂ ಕಲಿಯಲು ಅವಕಾಶ ಕಲ್ಪಿಸಿದ ತುಳು ಅಕಾಡೆಮಿಯ ಶ್ರಮವನ್ನು ಈ ಸಂದರ್ಭ ಮುಖ್ಯಮಂತ್ರಿಗಳು ಪ್ರಶಂಸಿಸಿದರು. ಮುಖ್ಯಮಂತ್ರಿಗಳು ಈ ಸಂದರ್ಭ ಈ ಹಿಂದೆ ನೀಡಿದ ಮನವಿಗೆ ಸ್ಪಂದಿಸಿ ರೂ.12 ಲಕ್ಷ ಗಳನ್ನು ಮಂಜೂರು ಮಾಡಿದರು.
ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂದರ್ಭ ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೋಡು, ಮಂಜೇಶ್ವರದ ಮಾಜಿ ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು, ತುಳು ಅಕಾಡೆಮಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿಗಾರ್, ಸಚಿತಾ ರೈ ಪೆರ್ಲ, ಕಾರ್ಯದರ್ಶಿ ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.