HEALTH TIPS

ಕಾಸರಗೋಡು ಜಿಲ್ಲಾಧಿಕಾರಿಗೆ ರಾಷ್ಟ್ರೀಯ ಪುರಸ್ಕಾರ

   
           ಕಾಸರಗೋಡು: ಜಿಲ್ಲಾಧಿಕಾರಿ ಡಾ. ಡಿ.ಸಜಿತ್ ಬಾಬು ಅವರು ಇ-ಗವರ್ನೆನ್ಸ್‍ನ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕೈಗೊಂಡ ಉತ್ತಮ ಸಾಧನೆ ಪರಿಗಣಿಸಿ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಅಂಗವೈಕಲ್ಯ ಹೊಂದಿದವರಿಗಾಗಿ ಜಿಲ್ಲೆಯಲ್ಲಿ ನಡೆಸಿರುವ  'ವಿ ಡಿಸರ್ವ್'ಕಾರ್ಯಕ್ರಮಕ್ಕೆ ಈ ಪುರಸ್ಕಾರ ನೀಡಲಾಗುತ್ತಿದೆ. ಚಿನ್ನದ ಪದಕ, ಪ್ರಶಸ್ತಿ ಫಲಕ ಒಳಗೊಂಡಿದೆ.
       ಫೆಬ್ರವರಿ 7ರಂದು ಮುಂಬೈಯಲ್ಲಿ ನಡೆಯುವ ಇ-ಗವರ್ನೆನ್ಸ್ ರಾಷ್ಟ್ರೀಯ ಸಮಾವೇಶದಲ್ಲಿ  ಪ್ರಶಸ್ತಿಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲೆಗೆ ಇದೇ ಮೊದಲ ಬಾರಿಗೆ ಈ ರೀತಿಯ ಪ್ರಶಸ್ತಿ ಲಭ್ಯವಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಡಿ.ಸಜಿತ್‍ಬಾಬು ಅವರ ನೇತೃತ್ವದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries