ಕಾಸರಗೋಡು: ವಿದ್ಯಾನಗರ ಚಿನ್ಮಯಕಾಲನಿ ಶ್ರೀ ಗೋಪಾಲಕೃಷ್ಣ ಸಂಗೀತ ವಿದ್ಯಾಶಾಲೆಯ 23ನೇ ವಾರ್ಷಿಕ ಸಮಾರಂಭ ಕಾಸರಗೋಡು ಲಲಿತಕಲಾ ಸದನದಲ್ಲಿ ಜರುಗಿತು. ನಗರಸಭಾ ಸದಸ್ಯೆ ಸವಿತಾ ಐ.ಭಟ್ ಸಮಾರಂಭ ಉದ್ಘಾಟಿಸಿದರು.
ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಂಗೀತ ಕಾರ್ಯಕ್ರಮ ನಡೆಯಿತು. ವಯಲಿನ್ನಲ್ಲಿ ಪ್ರಭಾಕರ ಕುಂಜಾರು, ಡಾ. ಮಾಯಾ ಮಲ್ಯ ಕಾಸರಗೋಡು, ಮೃದಂಗದಲ್ಲಿ ಕೊವ್ವಲ್ ಕಣ್ಣನ್ ಕಾಞಂಗಾಡು, ರಾಜೀವ್ಗೋಪಾಲ್ ವೆಳ್ಳಿಕೋತ್, ಟಿ.ಕೆ ವಾಸುದೇವ ಕಾಞಂಗಾಡ್ ಸಹಕರಿಸಿದರು.
ಈ ಸಂದರ್ಭ ಪ್ರಸಿದ್ಧ ಸಂಗೀತ ವಿದ್ವಾಂಸ ಅಭಿಲಾಶ್ ಗಿರಿಪ್ರಸಾದ್ ಚೆನ್ನೈ ಅವರ ಹಾಡುಗಾರಿಕೆ ನಡೆಯಿತು. ವಯಲಿನ್ನಲ್ಲಿ ಕರೈಕಲ್ ವೆಂಕಟಸುಬ್ರಹ್ಮಣ್ಯ ಚೆನ್ನೈ, ಮೃದಂಗದಲ್ಲಿ ಬಾಲಕೃಷ್ಣ ಕಾಮತ್ ಕೊಚ್ಚಿ, ಘಟಂನಲ್ಲಿ ಉಣ್ಣಿಕೃಷ್ಣನ್ ಮಂಜೂರ್, ಮೋರ್ಸಿಂಗ್ನಲ್ಲಿ ಗೋವಿಂದ ಪ್ರಸಾದ್ ಪಯ್ಯನ್ನೂರ್ ಸಹಕರಿಸಿದರು.

