HEALTH TIPS

ಕೊಲ್ಕತ್ತಾ ಪೆÇೀರ್ಟ್ ಗೆ ಶ್ಯಾಮ್ ಪ್ರಸಾದ್ ಮುಖರ್ಜಿ ಹೆಸರು ಮರು ನಾಮಕರಣ, ಪ್ರಧಾನಿ ಮೋದಿ ಘೋಷಣೆ!

       
      ಕೋಲ್ಕತ್ತಾ: ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲ್ಕತ್ತಾ ಪೆÇೀರ್ಟ್ ಟ್ರಸ್ಟ್ ಅನ್ನು ಭಾರತೀಯ ಜನಾ ಸಂಘದ  ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಪೆÇೀರ್ಟ್ ಎಂದು ಮರುನಾಮಕರಣ ಮಾಡಿದ್ದಾರೆ.
    ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ಮೂಲತಃ ಕೋಲ್ಕತ್ತದವರೇ ಆಗಿದ್ದಾರೆ. ನಿನ್ನೆ ಕೋಲ್ಕತ್ತಾ ಪೆÇೀರ್ಟ್ ಟ್ರಸ್ಟ್ನ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿಯವರು ಮಹತ್ವದ ನಿರ್ಧಾರ ಪ್ರಕಟಿಸಿದರು. ಡಾ. ಮುಖರ್ಜಿ ಭಾರತಿಯ ರಾಜಕಾರಣದ  ದಂತಕಥೆಯಾಗಿದ್ದು, ಅವರು ಅಭಿವೃದ್ಧಿಯ ನಾಯಕರಾಗಿದ್ದರು ಮತ್ತು 'ಒಂದು  ರಾಷ್ಟ್ರ, ಒಂದು  ಸಂವಿಧಾನ' ಕಲ್ಪನೆಯ ಜಾರಿಗಾಗಿ ಗಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ಮಾಹಾನ್ ನಾಯಕ . ಆ ಕಾರಣದಿಂದಲೇ ದೇಶದ ಬಹುಮುಖ್ಯ ಬಂದರಿಗೆ ಅವರ ಹೆಸರನ್ನಿಡಲಾಗಿದೆ ಎಂದರು. ಈ ಬಂದರನ್ನು ಪೂರ್ವ ಭಾರತದ ಗೇಟ್ ವೇ ಎಂದು ಕರೆಯಲಾಗುತ್ತದೆ.
      ಆದರೆ  ಕೋಲ್ಕತ್ತ ಪೆÇೀರ್ಟ್ ಟ್ರಸ್ಟ್ನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳಲಿಲ್ಲ. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಮತ್ತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries