HEALTH TIPS

ದೇಶಾದ್ಯಂತ ಎನ್ ಆರ್ ಸಿ ಜಾರಿ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಲೋಕಸಭೆಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

 
      ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಜಾರಿಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಲಿಖಿತ ಉತ್ತರ ನೀಡಿದೆ.
       ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರೀತಿ ಎನ್ ಆರ್ ಸಿಯನ್ನೂ ದೇಶಾದ್ಯಂತ ಜಾರಿಗೊಳಿಸುವ ಬಗ್ಗೆ ಯಾವುದಾದರು ಯೋಜನೆ ಹೊಂದಿದೆಯೇ ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಈ ಕ್ಷಣದವರೆಗೆ ಸರ್ಕಾರ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೇಶಾದ್ಯಂತ ಎನ್ ಆರ್ ಸಿ ಜಾರಿ ಕುರಿತ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಹೇಗೆ ಜನರ ಮೇಲೆ ಹೆಚ್ಚುವರಿ ಭಾರ ಹೊರಿಸಲು ಸಾಧ್ಯ ಎಂದು ರೈ ಪ್ರಶ್ನಿಸಿದ್ದಾರೆ.
     ಸೋಮವಾರದಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ರಾಜ್ಯಸಭೆ ಹಾಗೂ ಲೋಕಸಭೆ ಎರಡರಲ್ಲೂ ಪ್ರತಿಪಕ್ಷಗಳು ಹೆಚ್ಚಾಗಿ ಸಿಎಎ ಹಾಗೂ ಎನ್ ಆರ್ ಸಿ ಬಗ್ಗೆಯೇ ಹೆಚ್ಚಾಗಿ ಚರ್ಚೆ ನಡೆಸಿದ್ದಾರೆ. ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿಗಳು ಮುನ್ನೆಲೆಗೆ ಬಂದಾಗಿನಿಂದಲೂ ರಾಷ್ಟ್ರದ ಬಹುತೇಕ ಜನರು ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ.
   ಎನ್ ಪಿಆರ್ ನ್ನು ಹಿಂದೆಯೂ ಮಾಡಲಾಗಿತ್ತು. ಆದರೆ ಆಗ ಅದರಲ್ಲಿದ್ದ ಪ್ರಶ್ನೆಗಳು ತೀರ ಸರಳವಾಗಿದ್ದವು. ಆದರೆ ಈಗಿನ ಕೇಂದ್ರ ಸರ್ಕಾರದ ಎನ್ ಪಿಆರ್ ನಲ್ಲಿ ತಂದೆಯ ಹುಟ್ಟಿದ ದಿನಾಂಕದಂತಹ ಕ್ಲಿಷ್ಟ ಪ್ರಶ್ನೆಗಳನ್ನು ಇಡಲಾಗಿದೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ, ಕಾಂಗ್ರೆಸ್ ನ ಗುಲಾಬ್ ನಭಿ ಆಜಾದ್ ಆರೋಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries