HEALTH TIPS

ಮಾರಣಾಂತಿಕ ಕೊರೊನಾಗೆ ಭಾರತದಲ್ಲಿ ಮೊದಲ ಬಲಿ

     
          ಚೆನ್ನೈ: ಮಾರಣಾಂತಿಕ ಕೊರೊನಾವು ದೇಶದಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ಕೊರೊನಾ ವೈರಸ್ ಸೋಂಕು ದೇಶವನ್ನು ಪ್ರವೇಶಿಸದಂತೆ ನೋಡಿಕೊಳ್ಳಲು ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಂಡಿರುವಾಗಲೇ , ಚೀನಾದಿಂದ ಇತ್ತೀಚೆಗೆ ತಮಿಳುನಾಡಿಗೆ ಮರಳಿದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
          ಮೊದಲೇ ಅನಾರೋಗ್ಯಪೀಡಿತರಾಗಿದ್ದ ಶಕ್ತಿ ಕುಮಾರ್ ಅವರ ದೇಹ ಸ್ಥಿತಿ ಕೊರೊನಾ ವೈರಸ್ ಸೋಂಕಿನಿಂದ ಮತ್ತಷ್ಟು ವಿಷಮಗೊಂಡು ಸಾವು ಸಂಭವಿಸಿರಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ. ಕೊರೊನಾ ವೈರಾಣು ಸೋಂಕಿನಿಂದಲೇ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
                    ಇದು ದೇಶದ ಮೊದಲ ಕೊರೊನಾ ಸಾವು:
          ಇದು ದೇಶದ ಮೊದಲ ಕೊರೊನಾ ಸಾವು ಎಂಬು ಸುದ್ದಿ ಎಲ್ಲೆಡೆ ಹಬ್ಬಿದೆ. ಚೀನಾದಲ್ಲಿ ರೆಸ್ಟೋರೆಂಟ್ ಒಂದನ್ನು ನಡೆಸುತ್ತಿರುವ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕೊಥಾಯಿಮಂಗಳಂ ಗ್ರಾಮದ 42 ವರ್ಷದ ಶಕ್ತಿ ಕುಮಾರ್ ಅವರು ಜಾಂಡೀಸ್ ಹಿನ್ನೆಲೆಯಲ್ಲಿ ಇತ್ತೀಚೆಗೆ ತವರುನಾಡಿಗೆ ಮರಳಿದ್ದರು.
          ಜಾಂಡೀಸ್ ಜೊತೆಗೆ ಕೊರೊನಾ ಸೇರಿ ಮೃತಪಟ್ಟಿರುವ ಶಂಕೆ:
    ಚೀನಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದ ಶಕ್ತಿ ಕುಮಾರ್‍ಗೆ ಜಾಂಡೀಸ್ ಬಂದಿತ್ತು. ಭಾರತಕ್ಕೆ ಚಿಕಿತ್ಸೆ ಪಡೆಯಲೆಂದು ಬಂದಿದ್ದರು. ಮತ್ತೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಝಾಂಡೀಸ್ ಜೊತೆ ಕೊರೊನಾ ವೈರಸ್ ಸೇರಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
          ಕೊರೊನಾಗೆ ಆಸ್ಪತ್ರೆ ನಿರ್ದೇಶಕರೇ ಬಲಿ!:
    ಕೊರೊನಾ ಕೇಂದ್ರ ಬಿಂದುವಾಗಿರುವ ವುಹಾನ್‍ನಲ್ಲಿರುವ ಆಸ್ಪತ್ರೆಯ ನಿರ್ದೇಶಕರೊಬ್ಬರು ಮೃತಪಟ್ಟಿದ್ದಾರೆ. ಚೀನಾದ ಪ್ರಮುಖ ನಗರ ವುಹಾನ್ ನಲ್ಲಿ ಆಸ್ಪತ್ರೆಯ ನಿರ್ದೇಶಕರು ಮಂಗಳವಾರ ಸಾವನ್ನಪ್ಪಿದ್ದಾರೆ. ವುಚಾಂಗ್ ಆಸ್ಪತ್ರೆಯ ನಿರ್ದೇಶಕ ಲಿಯೂ ಜಿಮಿಂಗ್ ಬೆಳಗ್ಗೆ 10.30ರ ಸುಮಾರಿಗೆ ಮೃತರಾಗಿದ್ದಾರೆ. ಹ್ಯೂಬೆ ಆರೋಗ್ಯ ಇಲಾಖೆಯು ಲಿಯೂ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಆದರೆ ಕೆಲವೇ ನಿಮಿಷಗಳಲ್ಲಿ ಇಲ್ಲ ಅವರ ಜೀವಂತವಾಗಿದ್ದಾರೆ ಎನ್ನಲಾದ ಸುದ್ದಿ ಹರಿದಾಡಿತ್ತು. ಆದರೆ ಎರಡನೇ ಪೆÇೀಸ್ಟ್ ಲಿಯೂವಿನ ಸ್ನೇಹಿತರೊಬ್ಬರು ಮಾಡಿದ್ದು, ಅವರಿಗೆ ಪ್ರಸ್ತುತ ಸ್ಥಿತಿ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಚೀನಾದ ಹಿರಿಯ ಆರೋಗ್ಯಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಶುಕ್ರವಾರ 1716 ಮಂದಿ ಆರೋಗ್ಯ ನೌಕರರಿಗೆ ಕೊರೊನಾ ತಗುಲಿರುವುದು ತಿಳಿದುಬಂದಿದ್ದು, ಅದರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries