ಕಾಸರಗೋಡು: ವೇಗದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿರುವಂತೆ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 7 ಮಂದಿಗೆ ಸೋಂಕು ದೃಢಗೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 89 ಕ್ಕೇರಿತು.
ಕೇರಳ ರಾಜ್ಯದಲ್ಲಿ ಭಾನುವಾರ ಒಟ್ಟು 20 ಮಂದಿಗೆ ಕೊರೊನಾ ದೃಢವಾಗಿದೆ. ಕಣ್ಣೂರು ಜಿಲ್ಲೆಯಲ್ಲಿ 8, ಕಾಸರಗೋಡು-7, ಮಲಪ್ಪುರಂ, ತೃಶ್ಶೂರು, ತಿರುವನಂತಪುರ, ಎರ್ನಾಕುಳಂ ಮತ್ತು ಪಾಲ್ಘಾಟ್ನಲ್ಲಿ ತಲಾ ಒಬ್ಬರಂತೆ ಕೊರೊನಾ ವೈರಸ್ ಸೋಂಕು ತಗಲಿದೆ. ಇವರಲ್ಲಿ 18 ಮಂದಿ ವಿದೇಶದಿಂದ ಬಂದವರು. ಇಬ್ಬರಿಗೆ ಕೊರೊನಾ ಬಾಧಿತರೊಂದಿಗಿನ ಸಂಪರ್ಕದಿಂದ ಸೋಂಕು ಹರಡಿದೆ. ತಿರುವನಂತಪುರ ಜಿಲ್ಲೆಯಲ್ಲಿ ರೋಗ ದೃಢೀಕರಿಸಿದ ವ್ಯಕ್ತಿಯನ್ನು ಮೆಡಿಕಲ್ ಕಾಲೇಜು ಐಸೋಲೇಷನ್ ಐಸಿಯುನಲ್ಲಿ ದಾಖಲಿಸಲಾಗಿದೆ. ಎರ್ನಾಕುಳಂ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ರೋಗ ದೃಢೀಕರಿಸಿದೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಪರಿಶೋಧನೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಕೇರಳದಲ್ಲಿ ಈ ವರೆಗೆ ಒಟ್ಟು 202 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 181 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ 150 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಾಗಿ 1,41,211 ಮಂದಿ ನಿಗಾದಲ್ಲಿದ್ದಾರೆ. ಅವರಲ್ಲಿ 1,40,618 ಮಂದಿ ಮನೆಗಳಲ್ಲೂ, 593 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಒಟ್ಟು 6690 ಮಂದಿಯ ಸ್ಯಾಂಪಲ್ ಕಳುಹಿಸಲಾಗಿದೆ. ಇದರಲ್ಲಿ ಲಭ್ಯವಾದ 5518 ಸ್ಯಾಂಪಲ್ಗಳ ಪರಿಶೋಧನ ಫಲಿತಾಂಶ ನೆಗೆಟಿವ್ ಆಗಿದೆ.
ಲಾಕ್ ಡೌನ್ ಆದೇಶ ಉಲ್ಲಂಘನೆ : 18 ಕೇಸು ದಾಖಲು :
ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 18 ಕೇಸುಗಳನ್ನು ದಾಖಲಿಸಲಾಗಿದೆ. 28 ಮಂದಿಯನ್ನು ಬಂ„ಸಲಾಗಿದೆ. 14 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 1, ಕುಂಬಳೆಯಲ್ಲಿ 2, ವಿದ್ಯಾನಗರ 2, ಬದಿಯಡ್ಕದಲ್ಲಿ 1, ಬೇಡಗಂ ನಲ್ಲಿ 1, ಮೇಲ್ಪರಂಬದಲ್ಲಿ 1, ಬೇಕಲದಲ್ಲಿ 1, ಅಂಬಲತ್ತರ 1, ಹೊಸದುರ್ಗ 1, ಚಂದೇರ 2, ಚೀಮೇನಿ 1, ವೆಳ್ಳರಿಕುಂಡ್ 1, ಚಿತ್ತಾರಿಕಲ್ 1, ರಾಜಪುರಂನಲ್ಲಿ 2 ಕೇಸುಗಳನ್ನು ದಾಖಲಿಸಲಾಗಿದೆ. ಈ ವರೆಗೆ ಈ ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 190 ಪ್ರಕರಣಗಳನ್ನು ದಾಖಲಿಸಲಾಗಿದೆ. 234 ಮಂದಿಯನ್ನು ಬಂಧಿಸಲಾಗಿದೆ. 123 ವಾಹನಗಳನ್ನು ವಶಪಡಿಸಲಾಗಿದೆ.