HEALTH TIPS

ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ;ಕಾಸರಗೋಡು ಸಂಸದ ಸಹಿತ 7 ಕಾಂಗ್ರೆಸ್ ಸಂಸದರ ಅಮಾನತು

 
       ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಿನ್ನೆ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.
      ಕಾಂಗ್ರೆಸ್ ನ ಸಂಸದರಾದ ಗೌರವ್ ಗೊಗೊಯಿ, ಟಿ.ಎನ್.ಪ್ರತಾಪನ್, ಮಾಣಿಕಂ ಟಾಗೋರ್, ಗುರ್ಜೀತ್ ಸಿಂಗ್ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉಣ್ಣಿತ್ತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದರು. ಸತತ ಎಚ್ಚರಿಕೆ ಹೊರತಾಗಿಯೂ ಸದನದಲ್ಲಿ ಅಶಿಸ್ತಿನಿಂದ ವರ್ತನೆ ತೋರಿದ ಕಾರಣ 7 ಸಂಸದರನ್ನು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.
        ಸಂಸದರ ಅಮಾನತು ಆದೇಶವನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಪಾಸ್ ಮಾಡಲಾಯಿತು.
Seven Congress MPs- Gaurav Gogoi, TN Prathapan, Dean Kuriakose, R Unnithan, Manickam Tagore, Benny Behnan and Gurjeet Singh Aujla have been suspended from Lok Sabha for the rest of the budget session on charges of gross misconduct https://twitter.com/ANI/status/1235501085659299840 
829 people are talking about this

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries