HEALTH TIPS

ಎಲ್ಲರನ್ನು ಸ್ವಾಗತಿಸುವ ಒಂದೇ ಒಂದು ದೇಶವನ್ನು ನನಗೆ ತೋರಿಸಿ: ಯು ಎನ್ ಎಚ್ ಆರ್ ಸಿಗೆ ಜೈಶಂಕರ್ ತಿರುಗೇಟು!


          ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾತನಾಡಿದ್ದ ವಿಶ್ವಸಂಸ್ಧೆಯ ಮಾನವ ಹಕ್ಕುಗಳ ಮಂಡಳಿ(ಯು ಎನ್ ಎಚ್ ಆರ್ ಸಿ)ಗೆ ತಿರುಗೇಟು ನೀಡಿರುವ ವಿದೇಶಾಂಗ ಸಚಿವ ಜೈ ಶಂಕರ್ ಜಗತ್ತಿನಲ್ಲಿ ಎಲ್ಲರನ್ನೂ ಸ್ವಾಗಿತಸುವ ಒಂದೇ ಒಂದು ದೇಶವನ್ನು ನನಗೆ ತೋರಿಸಿ ಎಂದು ಸವಾಲು ಹಾಗಿದ್ದಾರೆ.
        ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಧೆಯ ಮಾನವ ಹಕ್ಕುಗಳ ಮಂಡಳಿ ಟೀಕಿಸಿರುವುದನ್ನು ಟೀಕಿಸಿದ ಜೈಶಂಕರ್ ಮಂಡಳಿಯ ನಿರ್ದೇಶಕರು ಈ ಹಿಂದೆ ಕೂಡ ತಪ್ಪು ಮಾಡಿದ್ದರು. ಕಾಶ್ಮೀರ ಸಮಸ್ಯೆಯನ್ನು ನಿಭಾಯಿಸುವ ಬಗ್ಗೆ ಮಾನವ ಹಕ್ಕುಗಳ ಮಂಡಳಿ ಹಿಂದಿನ ದಾಖಲೆಯನ್ನು ನೋಡಬೇಕು ಎಂದು ಹೇಳಿದ್ದಾರೆ. ಈ ಶಾಸನದ ಮೂಲಕ ನಾವು ಸ್ಥಿತಿಯಿಲ್ಲದವರ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದೇವೆ. ಅದನ್ನು ಪ್ರಶಂಸಿಸಬೇಕು ಎಂದು ಇಟಿ ಗ್ಲೋಬಲ್ ಬಿಸಿನೆಸ್ ಶೃಂಗಸಭೆಯಲ್ಲಿ ಸಿಎಎ ಕುರಿತಂತೆ ಕೇಳಿದಾಗ ಜೈಶಂಕರ್ ಉತ್ತರಿಸಿದರು. ನಾವು ಇದನ್ನು ದೊಡ್ಡ ಸಮಸ್ಯೆಯಾಗದಂತೆ ನಿಭಾಯಿಸಿದ್ದೇವೆ. ಪ್ರತಿಯೊಂದು ದೇಶದಲ್ಲೂ ಅಲ್ಲಿನ ಪೌರತ್ವವನ್ನು ನೋಡಿದಾಗ, ಒಂದು  ಮಾನದಂಡವನ್ನು ಹೊಂದಿರುತ್ತದೆ. ಆದರೆ ಪ್ರಪಂಚದ ಪ್ರತಿಯೊಬ್ಬರಿಗೂ ಸ್ವಾಗತವಿದೆ ಎಂದು ಹೇಳುವ ದೇಶವನ್ನು ನನಗೆ ತೋರಿಸಿ, ಯಾರು ಅದನ್ನು ಹೇಳುವುದಿಲ್ಲ ಎಂದು ಹೇಳಿದರು.
       ಕಾಶ್ಮೀರ ವಿಷಯದಲ್ಲಿ ಯು ಎನ್ ಹೆಚ್ ಆರ್ ಸಿ ನಿರ್ದೇಶಕರು ಭಾರತದ ನಿರ್ಧಾರವನ್ನು ಒಪ್ಪುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಯು ಎನ್ ಹೆಚ್ ಆರ್ ಸಿ ನಿರ್ದೇಶಕರು ಈ ಮೊದಲು ತಪ್ಪು ಮಾಡಿದ್ದಾರೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries