ಕಾಸರಗೋಡು: ಮಾ.15 ರಂದು ನಡೆಸಲು ತೀರ್ಮಾನಿಸಿದ್ದ ಕೇರಳ ತುಳು ಅಕಾಡೆಮಿಯ ಕಾರ್ಯಾಲಯವಾದ ತುಳು ಭವನದ ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದು ಅಧ್ಯಕ್ಷ ಉಮೇಶ್ ಎಂ.ಸಾಲಿಯಾನ್ ತಿಳಿಸಿದ್ದಾರೆ.
ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಸಾರ್ವಜನಿಕ ಸಮಾರಂಭ, ಸರಕಾರದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಪ್ರಕಟಣೆ ತಿಳಿಸಿದ್ದಾರೆ. ಮಂಜೇಶ್ವರದ ದುರ್ಗಿಪಳ್ಳದಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಾರ್ಯಾಲಯವನ್ನು ಕೇರಳ ಸಾಂಸ್ಕøತಿಕ ಸಚಿವ ಎ.ಕೆ. ಬಾಲನ್ ಅವರು ಉದ್ಘಾ ಟನೆ ನೆರವೇರಿಸಲಿದ್ದರು.

