ಮಧೂರು: ಶಿವಾಜಿ ಕಲಾ ಸಂಘ ಕೊಲ್ಯ ಮಧೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಹಾಗೂ ಡಾ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇದರ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಇಂದು(ಮಾ.15) ಮಧೂರು ಶಿವಾಜಿ ಕಲಾ ಸಂಘದ ಸಭಾ ಭವನದಲ್ಲಿ ನಡೆಯಲಿದೆ. ಆಧುನಿಕ ಸೌಕರ್ಯಗಳನ್ನೊಳಗೊಂಡ ಹಾಗೂ ತಜ್ಞರ ವೈದ್ಯರುಗಳ ಉಪಸ್ಥಿತಿಯಲ್ಲಿ ನಡೆಯುವ ಶಿಬಿರವನ್ನು ಅವಿನಾಶ್ ಕೊರ್ಜಾಲ್ ಅಧ್ಯಕ್ಷತೆಯಲ್ಲಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್.ಎಂ.ಎಸ್ ಉದ್ಘಾಟಿಸುವರು. ಕಾಸರಗೋಡು ಬ್ಲಾಕ್ ಪಂಚಾಯತಿ ಸದಸ್ಯ ಪ್ರಭಾಕರ.ಎ ಹಾಗೂ ಡಾ.ಎಸ್.ಎನ್ ರಾವ್ ಅಥಿತಿಗಳಾಗಿರುವರು. ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯುವ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.
ಇಂದು ಮಧೂರಲ್ಲಿ ಉಚಿತ ನೇತ್ರ ಶಿಬಿರ
0
ಮಾರ್ಚ್ 15, 2020
ಮಧೂರು: ಶಿವಾಜಿ ಕಲಾ ಸಂಘ ಕೊಲ್ಯ ಮಧೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಹಾಗೂ ಡಾ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇದರ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಇಂದು(ಮಾ.15) ಮಧೂರು ಶಿವಾಜಿ ಕಲಾ ಸಂಘದ ಸಭಾ ಭವನದಲ್ಲಿ ನಡೆಯಲಿದೆ. ಆಧುನಿಕ ಸೌಕರ್ಯಗಳನ್ನೊಳಗೊಂಡ ಹಾಗೂ ತಜ್ಞರ ವೈದ್ಯರುಗಳ ಉಪಸ್ಥಿತಿಯಲ್ಲಿ ನಡೆಯುವ ಶಿಬಿರವನ್ನು ಅವಿನಾಶ್ ಕೊರ್ಜಾಲ್ ಅಧ್ಯಕ್ಷತೆಯಲ್ಲಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್.ಎಂ.ಎಸ್ ಉದ್ಘಾಟಿಸುವರು. ಕಾಸರಗೋಡು ಬ್ಲಾಕ್ ಪಂಚಾಯತಿ ಸದಸ್ಯ ಪ್ರಭಾಕರ.ಎ ಹಾಗೂ ಡಾ.ಎಸ್.ಎನ್ ರಾವ್ ಅಥಿತಿಗಳಾಗಿರುವರು. ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯುವ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.

