HEALTH TIPS

ಮಲ್ಲಿಕಾರ್ಜುನ ಕ್ಷೇತ್ರ-ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಮತ್ತು ನೂತನ ರಾಜಗೋಪುರ ಲೋಕಾರ್ಪಣೆ


      ಕಾಸರಗೋಡು: ಇತಿಹಾಸ ಪ್ರಸಿದ್ಧ ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಮತ್ತು ನೂತನ ರಾಜಗೋಪುರ ಲೋಕಾರ್ಪಣೆ ಮಾ.13 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.
       ಮಾ.13 ರಂದು ಬೆಳಗ್ಗೆ ಪೂರ್ವಾಹ್ನ 7 ರಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶಪೂಜೆ, ಬಿಂಬ ಶುದ್ಧಿ ಕಲಶಾಭಿಷೇಕ, ಸಾನಿಧ್ಯ ಕಲಶಪೂಜೆ, ಸಾನ್ನಿಧ್ಯ ಕಲಶಾಭಿಷೇಕ ನಡೆಯಿತು. ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ರಾಜಗೋಪುರವನ್ನು ಲೋಕಾರ್ಪಣೆಗೈದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಅನಂತ ಕಾಮತ್ ಅಧ್ಯಕ್ಷತೆ ವಹಿಸಿದರು. ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ ಪದ್ಮನಾಭ ತಂತ್ರಿಗಳು ಆಶೀರ್ವಚನವಿತ್ತರು. ದೇವಸ್ಥಾನದ ಕಾರ್ಯನಿರ್ವಹಣಾ„ಕಾರಿ ಎಂ.ಬಾಬು, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಸಿ.ವಿ.ಪೆÇದುವಾಳ್ ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಿತು.
ಮಾ.12 ರಂದು ಸಂಜೆ ಪ್ರಾರ್ಥನೆ, ಗೋಪುರ ಪರಗ್ರಹಂ, ಪುಣ್ಯಾಹ, ಪ್ರಾಕಾರ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ ಜರಗಿತು. ಮಾ.19 ರಿಂದ 23 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries