ನವದೆಹಲಿ: ದೇಶಾದ್ಯಂತ ವ್ಯಾಪಿಸಿರುವ ಕೊರೋನಾ ಸೋಂಕು ತಡೆಯುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕರೆ ನೀಡಿದ್ದ ಜನತಾ ಕಪ್ರ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜನತೆ ಮನೆಯ ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು, ಸಾಂಕ್ರಾಮಿಕ ರೋಗದ ವಿರುದ್ಧದ ಸೇವೆಯಲ್ಲಿ ತೊಡಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೋವಿಡ್ -19ನಿಂದ ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆ 5 ನಿಮಿಷಕ್ಕೆ ಮನೆಯ ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು , ಸೇವೆಯಲ್ಲಿ ತೊಡಗಿರುವವವರಿಗೆ ಧನ್ಯವಾದ ಸಲ್ಲಿಸುವಂತೆ ಪ್ರಧಾನಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜನತೆ ಆದೇ ರೀತಿಯಲ್ಲಿ ಹೊರಬಂದು ಧನ್ಯವಾದ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ತಮ್ಮ ಕುಟುಂಬಸ್ಥರು ಜಾಗಟೆ, ಗಂಟೆ ಸದ್ದಿನೊಂದಿಗೆ ಕೃತಜ್ಞತೆ ಸಲ್ಲಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾಗಟೆ ಬಾರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗತಿ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.
#WATCH Uttar Pradesh Chief Minister Yogi Adityanath clangs bell in Gorakhpur to express gratitude to those providing essential services amid #CoronavirusPandemic.
1,261 people are talking about this



