HEALTH TIPS

ಕುಡುಕರ ಆತ್ಮಹತ್ಯೆ ಹೆಚ್ಚಳ- ಮದ್ಯ ಸರಬರಾಜಿಗೆ ಸರ್ಕಾರ ಆದೇಶ!

      ಕುಂಬಳೆ: ಕರೋನಾ ವೈರಸ್ ಹರಡದಂತೆ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಗೆ ಆದೇಶಿಸಿರುವುದರ ಬೆನ್ನಿಗೇ ಕೇರಳದಾತ್ಯಂತ ಮದ್ಯ ಮಾರಾಟ ಸ್ಥಗಿತಗೊಂಡಿದೆ. ಆದರೆ ಮದ್ಯಕ್ಕೆ ದಾಸರಾಗಿರುವವರು ತೀವ್ರ ಮತಿ ವಿಕಲ್ಪರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸರ್ಕಾರ ಇದೀಗ ಎಚ್ಚೆತ್ತಿದೆ.  ತಮಗೆ ಮದ್ಯ ಬೇಕು ಎಂದು ಹಲವರು ವಿಡಿಯೋ ಮಾಡಿ ಕಳುಹಿಸುತ್ತಿರುವುದಾಗಿ ಸರ್ಕಾರ ತಿಳಿಸಿದೆ. ಇದರ ಜೊತೆಗೆ ಮದ್ಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಸಹ ಹಾಕುತ್ತಿದ್ದಾರೆ. ಕುಡುಕರ ಆತ್ಮಹತ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಕೇರಳ ಸರ್ಕಾರ ಕೊನೆಗೂ ಮದ್ಯ ಸರಬರಾಜಿಗೆ ಆದೇಶಿಸಿದೆ. ಆದರೆ ಜನರು ಗುಂಪುಗೂಡಿ ಮದ್ಯ ಖರೀದಿಸುವುದನ್ನು ತಡೆಯುವ ನಿಟ್ಟಿನಲ್ಲಿ ಆನ್‍ಲೈನ್ ಮೂಲಕ ಮದ್ಯಮಾರಾಟದ ಚಿಂತನೆ ಸರ್ಕಾರ ಹೊಂದಿದ್ದು, ಅದರ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries