ಪೆರ್ಲ: ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುಣ್ಯ ಯೋಜನೆ ಕಾಮದುಘಾ ಯೋಜನೆಯನ್ವಯ ಕಾರ್ಯಚರಿಸುತ್ತಿರುವ
ಪೆರ್ಲ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಶ್ರೀ ಗೋವರ್ಧನ ಧರ್ಮಮಂದಿರದಲ್ಲಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿಯಂದು ಜರಗುವ ಗೋಪೂಜೆ, ಗೋಪಾಲಕೃಷ್ಣ ಪೂಜೆ ಹಾಗು ಭಜನೆ ವೇದಮೂರ್ತಿ ಕೃಷ್ಣ ಭಟ್ ಗುಂಡ್ಯಡ್ಕ ಅವರ ನೇತೃತ್ವದಲ್ಲಿ ಜರಗಿತು. ಮಹಾಲಿಂಗೇಶ್ವರ ಭಜನಾ ಮಂಡಳಿ ಬಜಕೂಡ್ಲು ಇವರಿಂದ ಭಜನಾ ಸೇವೆಯು ಈ ಸಂಧರ್ಭದಲ್ಲಿ ನಡೆಯಿತು.


