HEALTH TIPS

14 ದಿನಗಳ ಕ್ವಾರಂಟೈನ್ ನಲ್ಲಿ ಶ್ರೀಕ್ಷೇತ್ರ ಕೇದಾರನಾಥದ ಮುಖ್ಯ ಅರ್ಚಕ!

 
         ಡೆಹ್ರಾಡೂನ್: ಭಾರತದ ಪ್ರಸಿದ್ಧ ಯಾತ್ರಾಸ್ಥಳ, ಚಾರ್ ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನದ ಪ್ರಧಾನ ಅರ್ಚಕರು ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೇದಾರನಾಥದ ಪ್ರಧಾನ ಅರ್ಚಕರು ಹಾಗೂ  ಇತರ ಐದು. ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಉತ್ತರಾಖಂಡ ಅಧಿಕಾರಿಗಳು ಹೇಳಿದ್ದಾರೆ.
       ವಿಶೇಷ ಅನುಮತಿ ನೀಡಿದ ನಂತರ, ಪ್ರಧಾನ ಅರ್ಚಕ ಭೀಮಾಶಂಕರ್ ಅವರು ಮಹಾರಾಷ್ಟ್ರದ ನಾಂದೇಡ್ ನಿಂದ ರುದ್ರಪ್ರಯಾಗದ ಉಖಿಮತ್ ತಲುಪಿದ್ದರು.ಕೊರೋನಾ ವೈರಸ್ ಹಾವಳಿಯ ಹಿನ್ನೆಲೆ ನಿಯಮಾನುಸಾರ ಅರ್ಚಕರು ಕ್ಯಾರೆಂಟೈನ್ ನಲ್ಲಿದ್ದಾರೆ. ಬೇರೆ ರಾಜ್ಯದಿಂದ ಆಗಮಿಸಿರುವ ವ್ಯಕ್ತಿಯನ್ನು 14 ದಿನಗಳವರೆಗೆ ಕ್ವಾರಂಟೈನ್ ನಲ್ಲಿರಿಸಬೇಕೆಂದು ಉತ್ತರಾಖಂಡ ರಾಜ್ಯ ಸರ್ಕಾರ ನಿಯಮಾವಳಿ ತಂದಿದೆ.
       ಪ್ರಧಾನ ಅರ್ಚಕರು ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೋ ಇಲ್ಲವೋ ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ. ಅವರು ಅನುಮತಿ ಪಡೆದರೂ ಸಹ ಅಲ್ಲಿಯೇ ಅವರು ಕ್ವಾರಂಟೈನ್ ನಲ್ಲಿರುತ್ತಾರೆ." ಎಂದು ರುದ್ರಪ್ರಯಾಗ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಂಗೇಶ್ ಘಿಲ್ದಿಯಾ  ತಿಳಿಸಿರುವರು. ದೇವಾಲಯವನ್ನು ಮತ್ತೆ ತೆರೆದ ನಂತರ ಅವರು ಸಾಮಾಜಿ ಅಂತರವನ್ನು ಕಾಯ್ದುಕೊಳ್ಳಬೇಕಾಗುತ್ತದೆ.ಅವರ ಆರೋಗ್ಯ ತಪಾಸಣೆಗಳನ್ನು ನಿಯಮಿತವಾಗಿ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
      ಈ ಮಧ್ಯೆ ಉತ್ತರಾಖಂಡದಲ್ಲಿ ಈವರೆಗೆ 44 ಕೋವಿಡ್1-19 ಪ್ರಕರಣಗಳು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries