ಶ್ರೀನಗರ: ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಬಗ್ಗುಬಡಿದು ಹೊಡೆದುರುಳಿಸಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ಕು ಉಗ್ರರನ್ನು ಭಾರತೀಯ ಸೇನೆ ಮತ್ತು ಕಾಶ್ಮೀರ ಪೆÇಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದ್ದಾರೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರಾಂತ್ಯದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ, ಸ್ಥಳೀಯ ಪೆÇಲೀಸರೊಂದಿಗೆ ಸೇರಿ ಕಾರ್ಯಾಚರಣೆ ಆರಂಭಿಸಿದ್ದು. ಸೇನೆಯ ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಸೇನೆ ಆಗಮಿಸುತ್ತಿದ್ದಂತೆಯೇ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆ ಗರೆದರು. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ನಾಲ್ಕು ಉಗ್ರರನ್ನು ಮಡುಹಿದ್ದಾರೆ.
ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು, ಮೃತ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.
Jammu & Kashmir: Four terrorists have been killed in the encounter between personnel of Indian Army, Central Reserve Police Force, police & terrorists in Gudder area of Kulgam district. Operation is still underway. (Visuals deferred by unspecified time)
461 people are talking about this