HEALTH TIPS

ಕೊರೊನಾ: ಕಾಸರಗೋಡು ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ದೃಢ- 6 ಮಂದಿ ರೋಗ ಮುಕ್ತ


         ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಡಿಸಲಾಗಿದೆ. ಇದೇ ವೇಳೆ 6 ಮಂದಿ ರೋಗ ಮುಕ್ತರಾಗಿದ್ದಾರೆ. ಇದರೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು ಸೋಂಕು ಬಾಧಿತರ ಸಂಖ್ಯೆ 167. ಈ ಪೈಕಿ 79 ಮಂದಿ ರೋಗ ಮುಕ್ತರಾಗಿದ್ದಾರೆ. 88 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
        ಕೇರಳದಲ್ಲಿ ಮಂಗಳವಾರ ಹೊಸದಾಗಿ 8 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಡಿಸಲಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ತಿಳಿಸಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ ನಾಲ್ವರಿಗೆ, ಕಲ್ಲಿಕೋಟೆ ಜಿಲ್ಲೆಯಲ್ಲಿ ಮೂವರಿಗೆ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಬಾಧಿಸಿದೆ. ರೋಗ ಬಾಧಿತರಲ್ಲಿ ಐವರು ದುಬೈಯಿಂದ ಬಂದವರು. ಉಳಿದ ಮೂವರು ಕೊರೊನಾ ವೈರಸ್ ಸೋಂಕಿತರೊಂದಿಗಿನ ಸಂಪರ್ಕದಿಂದ ರೋಗ ಬಾಧಿಸಿದೆ. ಕಣ್ಣೂರು ಜಿಲ್ಲೆಯ ಮೂವರು, ಕಲ್ಲಿಕೋಟೆ ಮತ್ತು ಕಾಸರಗೋಡಿನ ತಲಾ ಒಬ್ಬರು ದುಬೈಯಿಂದ ಬಂದವರು. ಕಲ್ಲಿಕೋಟೆ ಜಿಲ್ಲೆಯ ಇಬ್ಬರಿಗೆ ಮತ್ತು ಕಣ್ಣೂರು ಜಿಲ್ಲೆಯ ಒಬ್ಬರು ಸಂಪರ್ಕದಿಂದ ರೋಗ ಬಾಧಿತರಾಗಿದ್ದಾರೆ. ಇದೇ ವೇಳೆ ಕೇರಳದಲ್ಲಿ ಮಂಗಳವಾರ 13 ಮಂದಿ ರೋಗ ಮುಕ್ತರಾಗಿದ್ದಾರೆ. ಕಾಸರಗೋಡು ಜಿಲ್ಲೆಯ 6 ಮಂದಿ(ಕಣ್ಣೂರು ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮತ್ತು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇಬ್ಬರು), ಎರ್ನಾಕುಳಂ, ಪಾಲ್ಘಾಟ್ ಜಿಲ್ಲೆಯ ತಲಾ ಇಬ್ಬರು, ಕೊಲ್ಲಂ, ತೃಶ್ಶೂರು, ಮಲಪ್ಪುರ ಜಿಲ್ಲೆಯ ತಲಾ ಒಬ್ಬರು ರೋಗ ಮುಕ್ತರಾಗಿದ್ದಾರೆ. ಪ್ರಸ್ತುತ ಕೇರಳ ರಾಜ್ಯದಲ್ಲಿ 173 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ವರೆಗೆ ರಾಜ್ಯದಲ್ಲಿ 211 ಮಂದಿ ರೋಗಮುಕ್ತರಾಗಿದ್ದಾರೆ. ಮಾ.21 ರಂದು ದುಬೈಯಿಂದ ಕಾಸರಗೋಡಿಗೆ ಬಂದಿದ್ದ 47 ರ ಹರೆಯದ ಚೆಂಗಳದ ವ್ಯಕ್ತಿಗೆ 23 ದಿನಗಳ ಬಳಿಕ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಾಗಿ 1,07,075 ಮಂದಿ ನಿಗಾದಲ್ಲಿದ್ದಾರೆ. ಅವರಲ್ಲಿ 1,06,511 ಮಂದಿ ಮನೆಗಳಲ್ಲೂ, 564 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಮಂಗಳವಾರ 81 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ರೋಗ ಲಕ್ಷಣಗಳುಳ್ಳ 16,235 ವ್ಯಕ್ತಿಗಳ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 15,488 ಸ್ಯಾಂಪಲ್‍ಗಳ ಪರೀಕ್ಷಾ ಫಲಿತಾಂಶ ನೆಗೆಟಿವ್ ಆಗಿದೆ.
             63 ಕೇಸುಗಳ ದಾಖಲು :
     ಲಾಕ್‍ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 63 ಕೇಸುಗಳನ್ನು ದಾಖಲಿಸಲಾಗಿದೆ. 25 ಮಂದಿಯನ್ನು ಬಂ„ಸಲಾಗಿದೆ. 12 ವಾಹನಗಳನ್ನು ವಶಪಡಿಸಲಾಗಿದೆ. ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 2 ಕೇಸುಗಳು, ಕುಂಬಳೆ 4, ಕಾಸರಗೋಡು 5, ವಿದ್ಯಾನಗರ 4, ಬದಿಯಡ್ಕ 3, ಆದೂರು 5, ಬೇಡಗಂ 2, ಮೇಲ್ಪರಂಬ 5, ಬೇಕಲ 8, ಹೊಸದುರ್ಗ 3, ನೀಲೇಶ್ವರ 3, ಚಂದೇರ 9, ವೆಳ್ಳರಿಕುಂಡ್ 3, ಚಿತ್ತಾರಿಕಲ್ 5, ರಾಜಪುರಂ 2 ಕೇಸುಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈ ವರೆಗೆ 828 ಕೇಸುಗಳು ದಾಖಲಾಗಿವೆ. 1313 ಮಂದಿಯನ್ನು ಬಂ„ಸಲಾಗಿದೆ. 472 ವಾಹನಗಳನ್ನು ವಶಪಡಿಸಲಾಗಿದೆ.
          ಅಸೌಖ್ಯದಿಂದ ನಿಧನ; ಸ್ಯಾಂಪಲ್ ಪರೀಕ್ಷೆಗೆ : ಅಸೌಖ್ಯದಿಂದ ಸಾವಿಗೀಡಾದ 18 ರ ಹರೆಯದ ಯುವತಿಯ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಡಿಎಂಒ ನಿರ್ದೇಶದಂತೆ ಚೆರ್ಕಳ ನಿವಾಸಿಯ ಸ್ಯಾಂಪಲನ್ನು ಕಳುಹಿಸಲಾಗಿದೆ. ಈಕೆ ಚೆಂಗಳದ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಶ್ವಾಸ ಸಮಸ್ಯೆಯಿಂದ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮೊದಲೇ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries