ಕಾಸರಗೋಡು: ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ನ್ಯಾಯವಾದಿ.ಕೆ.ಶ್ರೀಕಾಂತ್ ಒತ್ತಾಯಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಕರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಿದ ಕಾರಣ, ಇತರ ಕಾಯಿಲೆಗಳಿಂದ ತೊಡಕಿಗೊಳಗಾದ ಕೆಳವರ್ಗದ ಹಾಗೂ ಮಧ್ಯಮ ವರ್ಗದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೆಚ್ಚ ಭರಿಸಲು ಬಳಲುತ್ತಿರುವ ಸಾಮಾನ್ಯ ರೋಗಿಗಳ ಪರಿಹಾರಕ್ಕಾಗಿ 5 ಲಕ್ಷದ ವರೆಗಿನ ಚಿಕಿತ್ಸೆ ಉಚಿತವಾಗಿ ಲಭಿಸುವ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ಅನುಕೂಲವನ್ನು ಖಾಸಗಿ ಆಸ್ಪತ್ರೆಯಲ್ಲಿ ಲಭಿಸಿಸುವಂತೆ ಮಾಡಬೇಕು. ಜಿಲ್ಲೆಯ ಅನೇಕ ಖಾಸಗಿ ಆಸ್ಪತ್ರೆಗಳು ಈ ಸೌಲಭ್ಯವನ್ನು ನೀಡಲು ಸಿದ್ಧರಿದ್ದರೂ, ರಾಜ್ಯ ಸರ್ಕಾರ ಅನುಮತಿ ನೀಡದೇ ಇರುವುದು ವೇದನಾಜನಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


