ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 194 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವೆಬ್ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ವೈರಸ್ನ 86110 ಸಕ್ರಿಯ ಪ್ರಕರಣಗಳಿವೆ. ಈವರೆಗೆ 67691 ಮಂದಿ ಚೇತರಿಸಿಕೊಂಡಿದ್ದು 4531 ಮಂದಿ ಸಾವಿಗೀಡಾಗಿದ್ದಾರೆ.
ಅಹಮದಾಬಾದ್ನಲ್ಲಿ ಗುರುವಾರ 247 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 11344ಕ್ಕೆ ತಲುಪಿದೆ. ಇವತ್ತು 16 ರೋಗಿಗಳು ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 780ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ದೆಹಲಿಗೆ ಸಮೀಪವಿರುವ ಹರಿಯಾಣದ ಎಲ್ಲ ಗಡಿಯನ್ನು ಬಂದ್ ಮಾಡಲಾಗುವುದು ಎಂದು ಹರಿಯಾಣದ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ದೆಹಲಿಯಲ್ಲಿ ಒಂದೇ ದಿನ 1,024 ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 16,281ಕ್ಕೇರಿದೆ.
ಮಹಾರಾಷ್ಟ್ರದಲ್ಲಿ 2598 ಹೊಸ ಪ್ರಕರಣಗಳು ವರದಿಯಾಗಿದ್ದು 85ಮಂದಿ ಸಾವಿಗೀಡಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 344 ಪ್ರಕರಣ ದಾಖಲಾಗಿದ್ದು, ತಮಿಳುನಾಡಿನಲ್ಲಿ 827 ಮಂದಿಗೆ ಸೋಂಕು ದೃಢಪಟ್ಟಿದೆ. ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,372ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಸಚಿವ ಸಿ.ವಿಜಯಭಾಸ್ಕರ್ ಹೇಳಿದ್ದಾರೆ.