HEALTH TIPS

ಕೋವಿಡ್-19 ಒಂದಕ್ಕೇ ಎಲ್ಲವೂ ಅಲ್ಲ, ಬೇರೆ ರೋಗಿಗಳಿಗೂ ಚಿಕಿತ್ಸೆ ಅಗತ್ಯ: WHO ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್

            ನವದೆಹಲಿ: ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ರೋಗದ ವಿರುದ್ಧ ಸಂಪೂರ್ಣ ಪ್ರಯತ್ನ ಹಾಕಿ ಹೋರಾಟ ಮಾಡುತ್ತಿವೆ. ವೈದ್ಯಕೀಯ ವ್ಯವಸ್ಥೆಯ ಬಹುಪಾಲು ಈ ಕೋವಿಡ್-19 ವಿರುದ್ಧದ ಹೋರಾಟಕ್ಕೇ ಮೀಸಲಾಗಿದೆ. ಬೇರೆ ಬೇರೆ ರೋಗಗಳಿಂದ ಬಳಲುತ್ತಿರುವವರಿಗೆ ಸರಿಯಾದ ಚಿಕಿತ್ಸೆ ಸಿಗದೆ ಪರದಾಡುವ ಪರಿಸ್ಥಿತಿ ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ಈ ವಿಚಾರದಲ್ಲಿ ಜಗತ್ತಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಕೋವಿಡ್-19 ರೋಗವೊಂದಕ್ಕೇ ಎಲ್ಲರೂ ತಲೆಕೆಡಿಸಿಕೊಳ್ಳುವುದು ತರವಲ್ಲ. ಬೇರೆ ರೋಗಿಗಳಿಗೆ ಚಿಕಿತ್ಸೆಯ ಅಗತ್ಯವಿರುತ್ತದೆ ಎಂದು ಸೌಮ್ಯಾ ಸ್ವಾಮಿನಾಥನ್ ಹೇಳಿದರು.

         ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಲೇ ನಮ್ಮ ವೈದ್ಯಕೀಯ ವ್ಯವಸ್ಥೆ ಪ್ರಬಲಗೊಳ್ಳುತ್ತದೆ. ಇದರಿಂದ ಮುಂದೆ ಇಂಥ ರೋಗ ಬಂದರೆ ಎದುರಿಸಲು ಸುಲಭಸಾಧ್ಯವಾಗುತ್ತದೆ. ಹಾಗೆಯೇ, ಕೋವಿಡ್-19 ಈ ವಿಶ್ವದ ಕೊನೆಯ ಸಾಂಕ್ರಾಮಿಕ ರೋಗವಲ್ಲ. ರೋಗಗಳು ಬರುತ್ತಲೇ ಇರುತ್ತವೆ. ಅವುಗಳನ್ನ ಸಮರ್ಥವಾಗಿ ಎದುರಿಸಬಹುದು ಎಂದು ಡಬ್ಲ್ಯೂಎಚ್​ಒ ಮುಖ್ಯ ವಿಜ್ಞಾನಿ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries