HEALTH TIPS

ಅಂಚೆ ಕಚೇರಿ ಎದುರ ಸಿಐಟಿಯು ಪ್ರತಿಭಟನೆ


         ಉಪ್ಪಳ: ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ವಿರುದ್ದ ಸಿ ಐ ಟಿ ಯು  ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಉಪ್ಪಳ ಅಂಚೆ ಕಚೇರಿ ಮುಂದೆ ಬುಧವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
      ಸಿಐ ಟಿ ಯು  ಜಿಲ್ಲಾ ಉಪಾಧ್ಯಕ್ಷೆ ಕಾಂ ಬೇಬಿ ಶೆಟ್ಟಿ ಪ್ರತಿಭಟನೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು  ಕೋವಿಡ್ ಸಮಯದಲ್ಲಿ ಸಮಯದಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಕೊಳ್ಳೆ ಹೊಡೆಯುತ್ತಿದೆ. ನಿತ್ಯೋಪಯೋಗಿ ವಸ್ತುಗಳ ಬೆಲೆಯೇರಿಕೆಯಿಂದ ಜನಸಾಮಾನ್ಯರು ತೊಂದರೆಗೊಳಗಾಗುತ್ತಿದ್ದಾರೆ ಎಂದು ಹೇಳಿದ ಅವರು  ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಹಿಂದೆ ಸರಿಯಬೇಕು ಎಂದು ವಿನಂತಿಸಿಕೊಂಡರು.
      ಮುಖಂಡರಾದ ಪ್ರಶಾಂತ್ ಕನಿಲ ಅಧ್ಯಕ್ಷತೆ ವಹಿಸಿದ್ದರು. ರವೀಂದ್ರ ಶೆಟ್ಟಿ, ನೌಷಾದ್ ಉಪ್ಪಳ, ಕಮಲಾಕ್ಷ  ಮೊದಲಾದವರು ಮಾತನಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries