ಕಾಸರಗೋಡು: ಅರಬಿ ಸಮುದ್ರದಲ್ಲಿ ಲಕ್ಷದ್ವೀಪ ಹಾಗು ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ರೂಪುಗೊಂಡ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಬಿರುಸಿನ ಮಳೆ ಹಾಗು ತೀವ್ರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೇರಳದಲ್ಲಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ಆರಂಭಗೊಳ್ಳಲಿದೆ. ಮೇ 31 ರಂದು ಮತ್ತು ಜೂ.1 ರಂದು ಬೆಳಗ್ಗೆ ಸಾಮಾನ್ಯ ಮಳೆಯಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೋಟ್ಟಯಂ, ಎರ್ನಾಕುಳಂ, ಇಡುಕ್ಕಿ, ಮಲಪ್ಪುರಂ, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.