ನವದೆಹಲಿ: ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು.
ಈ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಟ್ಟು 10,000 ಹಾಸಿಗೆಗಳಿದ್ದು, ಲಕ್ಷಣ ರಹಿತ ಕೊರೋನಾ ಸೋಂಕಿತರಿಗೆ ಇಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಮನೆಯಲ್ಲಿ ಪ್ರತ್ಯೇಕ ವಾಸ ಮಾಡಲು ಸಾಧ್ಯವಾಗದಂತಹ ಲಕ್ಷಣ ರಹಿತ ಸೋಂಕಿತರಿಗೂ ಇಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.
ಆರೈಕೆ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ- ಸರಿಸುಮಾರು 20 ಫುಟ್ಬಾಲ್
ಮೈದಾನಗಳಷ್ಟು ವಿಸ್ತಾರವಾಗಿದೆ. ಅಲ್ಲದೆ ಒಟ್ಟು 200 ಅಂಕಣಗಳನ್ನು ಒಳಗೊಂಡಿದ್ದು, ಇದರಲ್ಲಿ ತಲಾ 50 ಹಾಸಿಗೆಗಳನ್ನು ಹಾಕಲಾಗಿದೆ. ಇನ್ನು ದೆಹಲಿ ಸರ್ಕಾರವು ಆಡಲಿತಾತ್ಮಕ ಬೆಂಬಲವನ್ನು ನೀಡಿದರೆ, ಇಂಡೋ-ಟಿಬೆಟನ್ ಗಡಿ ಪೆÇಲೀಸ್ ಪಡೆ ಆರೈಕೆ ಕೇಂದ್ರದಲ್ಲಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ. ಕೇಂದ್ರದ ಕಾರ್ಯಗಳಲ್ಲಿ ರಾಧಾ ಸ್ವಾಮಿ ಸತ್ಸಂಗ್'ನ ಸ್ವಯಂ ಸೇವಕರು ಕೂಡ ಕೈಜೋಡಿಸಲಿದ್ದಾರೆಂದು ತಿಳಿದುಬಂದಿದೆ.




