HEALTH TIPS

ಇಂದು ಕನ್ನಡ ಪತ್ರಿಕಾ ದಿನಾಚರಣೆ: 177 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಪತ್ರಿಕೋದ್ಯಮ

        ಕನ್ನಡ ಪತ್ರಿಕೆಗಳು ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಹಾಗೂ ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣದ ಹೋರಾಟದಲ್ಲೂ, ನಾಗರಿಕತೆಯ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಿದೆ. ಜನರ ಧ್ವನಿಯಾಗಿ, ಸಮಾಜದ ಕೈಗನ್ನಡಿಯಾಗಿ ಕನ್ನಡ ಪತ್ರಿಕೆಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿ ನಾಗರಿಕ ಬದುಕಿನಲ್ಲಿ ವಿಶಿಷ್ಟ ಸ್ಥಾನಮಾನವನ್ನು ತನ್ನದಾಗಿಸಿಕೊಂಡಿದೆ.
     ಭಾರತದಲ್ಲಿ ಧರ್ಮ ಪ್ರಚಾರಕ್ಕಾಗಿ ಬಂದ ಕ್ರೈಸ್ತ ಮಿಷನರಿಗಳೇ ಪತ್ರಿಕೋದ್ಯಮದ ಮೂಲಪುರುಷರು. ಮೊತ್ತಮೊದಲಿಗೆ ಪುಸ್ತಕ ರೂಪದಲ್ಲಿ, ನಿಯತಕಾಲಿಕೆ ರೂಪದಲ್ಲಿ ಪ್ರಸಾರ ಆರಂಭಿಸಿದ ಪತ್ರಿಕೋದ್ಯಮ ಕ್ರಮೇಣ ದಿನಪತ್ರಿಕೆ ರೂಪದಲ್ಲಿ ಪ್ರಸರಣಕ್ಕೆ ಮುನ್ನುಡಿ ಬರೆಯಿತು. 1440ರಲ್ಲಿ ಜರ್ಮನಿಯ ಜೋಹಾನ್ ಗುಟನ್‍ಬರ್ಗ್ ಎಂಬಲ್ಲಿ ಎರಕಹೊಯ್ದ ಅಚ್ಚುಮೊಳೆ ತಯಾರಿಸಿ ಕ್ರೈಸ್ತರ ಪವಿತ್ರ ಬೈಬಲ್ ಗ್ರಂಥವನ್ನು ಮುದ್ರಿಸಿದಾಗ ಅಂದಿನ ದಿನಗಳಲ್ಲಿ ಅದೊಂದು ಕ್ರಾಂತಿಕಾರಕ ಆವಿಷ್ಕಾರವಾಗಿ ಹೆಸರು ಪಡೆಯಿತು.
ಅದೇ ರೀತಿ ಕನ್ನಡ ಪತ್ರಿಕೋದ್ಯಮದ ಪಿತಾಮಹರೆಂಬ ಖ್ಯಾತಿಯೂ ಕ್ರೈಸ್ತ ಮಿಶನರಿಗಳಿಗೇ ಸಲ್ಲುತ್ತದೆ. ಧರ್ಮ ಪ್ರಚಾರದ ಜೊತೆಗೆ ಒಂದು ಪತ್ರಿಕೆಯನ್ನು ಪ್ರಸರಣ ರೂಪಕ್ಕೆ ತಂದು ಆ ಮೂಲಕ ಜನರಿಗೆ ಸುದ್ದಿ ಹಾಗೂ ಮಾಹಿತಿ ನೀಡಬೇಕೆಂಬ ಬಾಶೆಲ್ ಮಿಷನ್ ಚಿಂತಿಸಿದ ಫಲವಾಗಿ ಕನ್ನಡದ ಮೊತ್ತ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಎಂಬ ಪಾಕ್ಷಿಕ 1843 ರಲ್ಲಿ ಸಾಕಾರ ರೂಪ ಪಡೆದು ನಾಗರಿಕ ಸಮಾಜಕ್ಕೆ ಅರ್ಪಣೆಗೊಂಡಿತು. ಬಾಶಲ್ ಮಿಷನ್‍ನ ‘ರೆವರೆಂಡ್ ಹರ್ಮನ್ ಮೊಗ್ಲಿಂಗ್’ ಈ ಪತ್ರಿಕೆಯ ಸಂಪಾದಕರಾಗಿದ್ದರು. ಇದರಿಂದಾಗಿ ಇವರನ್ನು ‘ಕರ್ನಾಟಕ ಪತ್ರಿಕಾ ರಂಗದ ಪಿತಾಮಹ’ ಎಂದು ಇಂದಿಗೂ ಕನ್ನಡ ಪತ್ರಿಕಾ ರಂಗ ಸ್ಮರಿಸಿಕೊಳ್ಳುತ್ತಿದೆ.
   ಪ್ರಮುಖ ಸುದ್ದಿಗಳು ಹಾಗೂ ಸ್ಥಳೀಯ ಆಸಕ್ತಿದಾಯಕ ವಿಚಾರಗಳನ್ನು ಹೊತ್ತುಕೊಂಡು ‘ಮಂಗಳೂರು ಸಮಾಚಾರ’ದ ಮೊದಲ ಸಂಚಿಕೆ 1843ರ ಜುಲೈ 1 ರಂದು ಮಂಗಳೂರಿನಿಂದ ಪ್ರಕಟವಾಯಿತು. ಕನ್ನಡ ಪತ್ರಿಕಾ ರಂಗದ ಮೊದಲ ಆವೃತ್ತಿ ಹೊರಬಂದ ದಿನವನ್ನು ಸ್ಮರಿಸುವುದಕ್ಕಾಗಿ ಕರ್ನಾಟಕದಲ್ಲಿ ಇಂದಿಗೂ ಜುಲೈ 1 ರಂದು ‘ಪತ್ರಿಕಾ ದಿನ’ವಾಗಿ ಆಚರಿಸಲ್ಪಡುತ್ತಿದೆ. ಆ ಪ್ರಯುಕ್ತ ಜುಲೈ ತಿಂಗಳು ಪೂರ್ತಿ ಪತ್ರಕರ್ತರ ಸಂಘ, ಕಾರ್ಯನಿರತ ಪತ್ರಕರ್ತ ಸಂಘ, ಕರ್ನಾಟಕ ಪತ್ರಕರ್ತರ ಸಂಘ, ಎಡಿಟರ್ಸ್ ಕ್ಲಬ್, ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಮೊದಲಾದ ಮಾಧ್ಯಮ ಪ್ರತಿನಿಧಿಗಳ ಸಂಘ-ಸಂಸ್ಥೆಗಳು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ವಿವಿಧ ಸಾಹಿತ್ಯಿಕ, ಸಾಂಸ್ಕøತಿಕ ಹಾಗೂ ಪತ್ರಿಕೋದ್ಯಮ ಸಂಬಂಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ.

ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries