HEALTH TIPS

ಜಿಲ್ಲೆಯಲ್ಲಿ ವಿವಾಹ, ಮರಣೋತ್ತರ ಸಮಾರಂಭಗಳು ಕೋವಿಡ್ ನಿಬಂಧನೆಗಳೊಳಗೆ ಕಡ್ಡಾಯ- ಜಿಲ್ಲಾ ಮಟ್ಟದ ಜನಪ್ರತಿನಿಧಿಗಳ ಸಭೆ

           ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ವಿವಾಹ, ಮರಣೋತ್ತರ ಸಮಾರಂಭಗಳು ಇತ್ಯಾದಿಗಳನ್ನು ಕೋವಿಡ್ ಪ್ರತಿರೋಧ ಚಟುವಟಿಕೆಗಳನ್ನು ಪಾಲಿಸುವಿಕೆ ಖಚಿತಪಡಿಸಬೇಕು. ನಿಗಡಿಪಡಿಸಲಾದ ಸಂಖ್ಯೆಗಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಜನಪ್ರತಿನಿಧಿಗಳ ಸಭೆ ತಿಳಿಸಿದೆ.
          ಕಂದಾಯ ಸಚಿವ ಇ.ಚಂದ್ರಶೇಖರನ್ ಅವರು ವೀಡೀಯೋ ಕಾನ್ಪ ರೆನ್ಸ್ ಮೂಲಕ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ತಪಾಸಣೆಗಳನ್ನು ಅಧಿಕಗೊಳಿಸಲು ಯತ್ನ ನಡೆಸಬೇಕು. ವಾರ್ಡ್ ಮಟ್ಟದ ಚಟುವಟಿಕೆ ಚುರುಕುಗೊಳಿಸುವಲ್ಲಿ ಜನಪ್ರತಿನಿಧಿಗಳ ಸಕ್ರಿಯ ಭಾಗವಹಿಸುವಿಕೆ ಅಗತ್ಯ. ಸನ್ನದ್ಧ ಪೆÇೀರ್ಟಲ್ ನಲ್ಲಿ ನೋಂದಣಿ ನಡೆಸಿರುವ ಸ್ವಯಂ ಸೇವಕರಲ್ಲದೆ, ಎನ್.ಎಸ್.ಎಸ್. ಸ್ವಯಂಸೇವಕರನ್ನೂ ಕೋವಿಡ್ ಪ್ರತಿರೋಧ ಚಟುವಟಿಕೆಗಳಲ್ಲಿ ಬಳಸುವಂತೆ ಸಹಕಾರ ನೀಡುವಂತೆ ಕಂದಾಯ ಸಚಿವ ತಿಳಿಸಿದರು. ಮೀನುಗಾರಿಕೆ ನಡೆಸುವಲ್ಲಿ ಸಾಂಪ್ರದಾಯಿಕ ದೋಣಿಗಳನ್ನು ಬಳಸಿ ಕಾಯಕ ನಡೆಸಲು ಅನುಮತಿಯಿದೆ ಎಂದವರು ನುಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರ, ರಾಜಕೀಯ ಪಕ್ಷಗಳ ಪ್ರತಿನಿಧಿಗಳ, ವ್ಯಾಪಾರಿ-ವ್ಯವಸಾಯಿ ಪ್ರತಿನಿಧಿಗಳ ಸಭೆಯೊಂದನ್ನು ವೀಡಿಯೋ ಕಾನ್ ಫೆರೆನ್ಸ್ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. 
          ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರಾದ ಎಂ.ಸಿ.ಕಮರುದ್ದೀನ್, ಎನ್.ಎ.ನೆಲ್ಲಿಕುನ್ನು, ಕೆ.ಕುಂuಟಿಜeಜಿiಟಿeಜರಾಮನ್, ಎಂ.ರಾಜಗೋಪಾಲನ್, ನೀಲೇಶ್ವರ ನಗರಸಭೆ ಅಧ್ಯಕ್ಷ ಪೆÇ್ರ.ಕೆ.ಪಿ.ಜಯರಾಜನ್, ಕಾಸರಗೋಡು ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ, ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ಉಪಸ್ಥಿತರಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries