ಕಾಸರಗೋಡು: ಟಿ.ಎಸ್.ತಿರುಮುಂಬ್ ಸಾಂಸ್ಕೃತಿಕ ಸಮುಚ್ಚಯದ ನಿರ್ಮಾಣ ಕಾಮಗಾರಿಗೆ ರಾಜ್ಯ ಸಂಸ್ಕøತಿ ಖಾತೆ ಸಚಿವ ಎ.ಕೆ.ಬಾಲನ್ ಗುರುವಾರ ವೀಡಿಯೋ ಕಾನ್ ಫೆರೆನ್ಸ್ ಮೂಲಕ ಚಾಲನೆನೀಡಿದರು.
ಕಾಸರಗೋಡು ಜಿಲ್ಲೆಯ ಮಡಿಕೈ ಗ್ರಾಮಪಂಚಾಯಿತಿಯ ಅಂಬಲತ್ತರದಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯಅತಿಥಿಯಾಗಿದ್ದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಕಾಞಂಗಾಡ್ ಬ್ಲೋಕ್ಪಂಚಾಯತ್ ಅಧ್ಯಕ್ಷೆ ಎಂ.ಗೌರಿ, ಮಡಿಕೈ ಗ್ರಾಮಪಂಚಾಯತ್ ಅಧ್ಯಕ್ಷ ಸಿ.ಪ್ರಭಾಕರನ್ ಮೊದಲಾವರು ಉಪಸ್ಥಿತರಿದ್ದರು. ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ರಾಣಿ ಜಾರ್ಜ್ ಸ್ವಾಗತಿಸಿದರು. ಕೆ.ಎಸ್.ಡಿ.ಎಫ್.ಸಿ. ಆಡಳಿತೆನಿರ್ದೇಶಕಿ ಎನ್.ಮಾಯಾ ವರದಿ ವಾಚಿಸಿದರು. ಸಂಸ್ಕೃತಿ ಇಲಾಖೆ ನಿರ್ದೇಶಕ ಟಿ.ಆರ್.ಸದಾಶಿವನ್ ವಂದಿಸಿದರು. ಅಂಬಲತ್ತರದಲ್ಲಿ 41.95 ಕೋಟಿ ರೂ. ವೆಚ್ಚದಲ್ಲಿ ಈ ಸಮುಚ್ಚಯ ನಿರ್ಮಾಣಗೊಳ್ಳಲಿದೆ.


