HEALTH TIPS

ಇಂದು ಡಾ.ಬನಾರಿಯವರ ಕೃತಿ ಬಿಡುಗಡೆ-ಝೂಂ ವೆಬಿನಾರ್ ಲಿಂಕ್ ಇಲ್ಲಿದೆ

 
               ಮಂಜೇಶ್ವರ: ಮಂಗಳೂರು ವಿಶ್ವವಿದ್ಯಾಲಯ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಇಂದು (ಶನಿವಾರ) ಸಂಜೆ 4 ರಿಂದ ಝೂಂ ಆ್ಯಪ್ ಮೂಲಕ ವೆಬಿನಾರ್ ನಲ್ಲಿ ಕಾಸರಗೋಡಿನ ಹಿರಿಯ ಸಾಹಿತಿ, ಲೇಖಕ,ಯಕ್ಷಗಾನ ಅರ್ಥಧಾರಿ ವೈದ್ಯ ಡಾ.ರಮಾನಂದ ಬನಾರಿ ಅವರ ಅರ್ಥಾಯನ ಮತ್ತು ಒಳದಾರಿಯ ಬೆಳದಿಂಗಳು ಕೃತಿಗಳ ಬಿಡುಗಡೆ ಹಾಗು ತಾಳಮದ್ದಳೆ:ಸ್ವತಂತ್ರ ಕಲೆಯಾಗಬಹುದೇ? ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. 
         ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ಕೃತಿ ಬಿಡುಗಡೆ ಹಾಗೆ ಆಶೀರ್ವಚನ ನೀಡುವರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪೆÇ್ರ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಕೃತಿ ಅವಲೋಕನ ಮಾಡಲಿದ್ದಾರೆ. ಯಕ್ಷಗಾನ ಅರ್ಥಧಾರಿಗಳು ಮತ್ತು ಸಾಹಿತಿ ಡಾ.ರಮಾನಂದ ಬನಾರಿ ಮಂಜೇಶ್ವರ ಅವರು ವಿಶೇಷ ಉಪನ್ಯಾಸ ನೀಡುವರು. ವೆಬಿನಾರ್ ಲಿಂಕ್  https://meet.google.com/wkk-shxs-kex        ಮೂಲಕ ಭಾಗವಹಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries