ಮಂಜೇಶ್ವರ: ಮಂಜೇಶ್ವರ ಎಸ್ ಎ ಟಿ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿ ವಚನ ಕೆ.ಎ. ಯು.ಎಸ್.ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಪ್ರಾಧ್ಯಾಪಕ ಟಿ.ಎ.ಎನ್.ಖಂಡಿಗೆ-ಶಿಕ್ಷಕಿ ಕವಿತಾ ಕೂಡ್ಲು ದಂಪತಿಗಳ ಪುತ್ರಿ. ಈಕೆಯ ಶೈಕ್ಷಣಿಕ ಸಾಧನೆಗೆ ಶಾಲಾ ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಆಡಳಿತ ಸಮಿತಿ ಅಭಿನಂದನೆ ಸಲ್ಲಿಸಿದೆ.