ತಿರುವನಂತಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸುವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ತಜ್ಞರು ರಾಜ್ಯದಲ್ಲಿ ಲಾಕ್ ಡೌನ್ ಮಾಡಲು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದರು.
ಎಲ್ಲವನ್ನೂ ಪರಿಶೀಲಿಸಿದ ನಂತರ ಲಾಕ್ಡೌನ್ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಸಂಪೂರ್ಣ ಲಾಕ್ಡೌನ್ ನ ಸಮಸ್ಯೆಯನ್ನು ಪರಿಗಣಿಸಬೇಕಾಗುತ್ತದೆ. ಯಾವುದೇ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸಿದ್ಧವಾಗಿದೆ. ರಾಜಧಾನಿಯಲ್ಲಿ ಸಂಪರ್ಕಗಳ ಮೂಲಕ ಕೊರೊನಾ ಹರಡುವುದರೊಂದಿಗೆ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಿಎಂ ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಶೀಘ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸುವ ಬಗ್ಗೆ ಮುಖ್ಯಮಂತ್ರಿ ತಮ್ಮ ನಿಲುವನ್ನು ತಿಳಿಸಿದ್ದಾರೆ. ಬುಧವಾರ ಕೋವಿಡ್ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ. ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ, ಲಾಕ್ಡೌನ್ಗಳು ಸೇರಿದಂತೆ ನಿಬರ್ಂಧಗಳನ್ನು ಘೋಷಿಸುವ ಅಗತ್ಯವು ವಿವಿಧ ಕೋನಗಳಿಂದ ಹೆಚ್ಚುತ್ತಿದೆ.
ಬುಧವಾರ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿ 1038 ಪ್ರಕರಣಗಳು ದೃಢಪಡಿಸಲಾಗಿತ್ತು. ಗಂಭೀರ ಅಂಶವೆಂದರೆ ಸಂಪರ್ಕದ ಮೂಲಕ 785 ಜನರಿಗೆ ಸೋಂಕು ತಗುಲಿರುವುದಾಗಿದೆ. ಈ ಪೈಕಿ 57 ರ ಸಂಪರ್ಕ ವಿವರಗಳು ಸ್ಪಷ್ಟವಾಗಿಲ್ಲ. ಮೂರು ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 274 ಮಂದಿ ರೋಗಮುಕ್ತರಾದರು. ರಾಜ್ಯದಲ್ಲಿ ಈವರೆಗೆ 15032 ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸಿಎಂ ಹೇಳಿದರು.


