ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಲಬಿಸಿದ ಆಹಾರ ಕಿಟ್ನ ವಿತರಣೆಯನ್ನು ಶಾಲಾ ಸಂಚಾಲಕರಾದ ವಂ|ಫ್ರಾನ್ಸಿಸ್ ರೋಡ್ರಿಗಸ್ ಅವರು ನೆರವೇರಿಸಿದರು.
ಕಾರ್ಯಕ್ರಮವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಸಹಕಾರದೊಂದಿಗೆ ಮಕ್ಕಳ ರಕ್ಷಕರ ಮೂಲಕ ಕೋವಿಡ್ -19 ಮುಂಜಾಗ್ರತಾ ಮಾನದಂಡಗಳನ್ನು ಪಾಲಿಸಿ ವಿತರಿಸಲಾಯಿತು.


