ನವದೆಹಲಿ: ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.
ಇಂದು ದೇಶಾದ್ಯಂತ ಪ್ರತಿಭಟನೆಗೆ ಚಾಲನೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜನರು ಪರೀಕ್ಷೆ ನಡೆಸುವುದನ್ನು ವಿರೋಧಿಸಬೇಕೆಂದು ಒತ್ತಾಯಿಸಿದ್ದಾರೆ.
ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಮತ್ತು ಪ್ರವಾಹ ಸ್ಥಿತಿಯಂತಹ ಸಂಕಷ್ಟವಿದ್ದು ಈ ಸಂದರ್ಭದಲ್ಲಿ ಸರ್ಕಾರ ಪರೀಕ್ಷೆ ವಿದ್ಯಾರ್ಥಿಗಳ ಜೀವನ ಜತೆ ಚಲ್ಲಾಟವಾಡಬಾರದು. ವಿದ್ಯಾರ್ಥಿಗಳ ಜೊತೆ ನೀವು ಧ್ವನಿಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯ ಬಗ್ಗೆ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಮಾತನ್ನು ಕೇಳಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Unite your voice with lakhs of suffering students. #SpeakUpForStudentSafety from 10am onwards.
Let’s make the Govt listen to the students.
लाखों परेशान छात्रों के साथ अपनी आवाज़ जोड़िए।
#SpeakUpForStudentSafety आज 10 बजे से।
आइए, सरकार से छात्रों की बात सुनने की माँग करें।



