ತಿರುವನಂತಪುರ: ಓಣಂ ಹಿನ್ನೆಲೆಯಲ್ಲಿ ಜನಸಾಮಾನ್ಯರ ಪ್ರಯಾಣ ಅನುಕೂಲತೆಗಳಿಗಾಗಿ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲಾಗಿದೆ. ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ವಿಶೇಷ ಅನುಮತಿ ನೀಡಲಾಗಿದೆ. ಕೋವಿಡ್ ಮಾರ್ಗನಿರ್ದೇಶನಗಳಿಗೆ ಅನುಗುಣವಾಗಿ ಸೆಪ್ಟೆಂಬರ್ 2 ರವರೆಗೆ ಅನುಮತಿ ನೀಡಲಾಗಿದೆ.
ಎಲ್ಲಾ ಜಿಲ್ಲೆಗಳಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಪ್ರಸ್ತುತ ನೆರೆಯ ಜಿಲ್ಲೆಗಳಿಗೆ ಮಾತ್ರ ಅವಕಾಶವಿದೆ. ಜುಲೈ ಮೊದಲ ಮೂರು ತಿಂಗಳು ಖಾಸಗಿ ಬಸ್ಸುಗಳು, ಪ್ರವಾಸೋದ್ಯಮ ಬಸ್ಸುಗಳು, ರಾಜ್ಯ ಸಾರಿಗೆ ಬಸ್ ಗಳು ಮತ್ತು ಗುತ್ತಿಗೆ ವಾಹನಗಳ ಮೇಲಿನ ವಾಹನ ತೆರಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ಸಚಿವ ಎ.ಕೆ.ಶಶೀಂದ್ರನ್ ಈ ಹಿಂದೆ ತಿಳಿಸಿದ್ದರು.
ತೆರಿಗೆ ರಿಯಾಯಿತಿಯಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸೇವೆಗಳನ್ನು ಓಣಂ ಸಮಯದಲ್ಲಿ ಪುನರಾರಂಭಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ತಿಳಿಸಿರುವರು. ಜನರು ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಈ ಪರಿಸ್ಥಿತಿಯಲ್ಲಿ ಸೇವೆಗಳನ್ನು ಪ್ರಾರಂಭಿಸಬೇಕು ಎಂದು ಅವರು ನಿರ್ದೇಶನ ನೀಡಿರುವರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಓಣಂ ಆಚರಣೆಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿನ್ನೆ ಈ ಆದೇಶ ಹೊರಡಿಸಿದ್ದರು. ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ತೆರೆಯಲು ನಿಬಂಧನೆಗಳಿಂದ ಕೂಡಿದ ಅನುಮತಿ ವಿಧಿಸಲಾಯಿತು. ಓಣಂಗೆ ಸಂಬಂಧಿಸಿದಂತೆ ಅಂಗಡಿಗಳಲ್ಲಿ ಅಥವಾ ಮಾರುಕಟ್ಟೆಗಳಲ್ಲಿ ಜನಸಂದಣಿ ಇರಬಾರದು, ಪ್ರದರ್ಶನಗಳು ಮತ್ತು ಮೇಳಗಳನ್ನು ಅನುಮತಿಸಲಾಗುವುದಿಲ್ಲ, ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಶಿಫಾರಸುಗಳನ್ನು ಜಾರಿಗೆ ತರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳ ತುರ್ತು ಸಭೆ ಕರೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.


