ಕಾಸರಗೋಡು: ರಾಜ್ಯ ಸರಕಾರದ ಅನುಮತಿ ಪಡೆದ ಕೋವಿಡ್ ರೋಗಿಗಳು ಸ್ವಗೃಹಗಳಲ್ಲೇ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.
ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಬಾಧಿತರ ಸಂಖ್ಯೆ ದಿನೇದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ. ಪಿ.ಸಿ.ಆರ್., ಆಂಟಿಜೆನ್ ಟೆಸ್ಟ್ ಗಳಲ್ಲಿ ಪಾಸಿಟಿವ್ ಕೇಸ್ ಪತ್ತೆಯಾದ, ಆದರೆ ರೋಗದ ಲಕ್ಷಣ ಹೊಂದದೇ ಇರುವ ಮಂದಿಗಳು, ಈ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನುಡಿದರು.
ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳ ಶುಶ್ರೂಷೆ ಸರಿಯಾದ ದಿಶೆಯಲ್ಲಿ ಸಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಟೆಲಿ ಮೆಡಿಸಿನ್ ಸಹಿತ ಎಲ್ಲ ಸೌಲಭ್ಯಗಳನ್ನೂ ಸಜ್ಜುಗೊಳಿಸಲಾಗುವುದು. ರೋಗಿಗಳ ಯೋಗಕ್ಷೇಮ ಇತ್ಯಾದಿ ವಿಚಾರಿಸುವ ನಿಟ್ಟಿನಲ್ಲಿ ಸೌಲಭ್ಯಗಳನ್ನು ಏರ್ಪಡಿಸಲಾಗುವುದು.


