ಮಂಜೇಶ್ವರ: ದೈಗೋಳಿ ಜ್ಞಾನೋದಯ ಸಮಾಜದ ಆಶ್ರಯದಲ್ಲಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೈಗೋಳಿಯ ನೇತೃತ್ವದಲ್ಲಿ ಕಳೆದ 38 ವರ್ಷಗಳಿಂದ ದೈಗೋಳಿ ಗಣೇಶ ಮಂದಿರದಲ್ಲಿ ಆಚರಿಸಿಕೊಂಡು ಬರುತ್ತಿರುವ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಈ ವರ್ಷ ಪ್ರತ್ಯೇಕ ಪರಿಸ್ಥಿತಿ ಕಾರಣ ಹಿಂದಿನಂತೆ ಆಚರಿಸಲು ಅನಾನುಕೂಲಗಿದೆ ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆ.22 ರಂದು ಶನಿವಾರ ಗಣೇಶ ಚತುರ್ಥಿಯಂದು ಬೆಳಗ್ಗೆ 11 ಗಂಟೆಗೆ ವೇ. ಮೂ. ಶ್ರೀ. ಕೆ. ರಾಮ ಮೂರ್ತಿ ಕುರಿಯ ರವರ ನೇತೃತ್ವದಲ್ಲಿ ಗಣಪತಿ ಹವನ ದೊಂದಿಗೆ ಶ್ರೀ ಮಹಾಗಣಪತಿ ದೇವರನ್ನು ಪ್ರಾಥಿಸಿ ಆರಾಧಿಸಲು ಹಾಗೂ ಸರ್ಕಾರದ ನಿಯಮಾವಳಿ ಪ್ರಕಾರ ಎಲ್ಲರೂ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಪಾಲಿಸಿಕೊಂಡು ಕಾರ್ಯಕ್ರಮದಲ್ಲಿ ಭಾವಹಿಸಬೇಕೆಂದು ಗಣೇಶೋತ್ಸವ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.


