ತಿರುವನಂತಪುರ: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಓಣಂ ಆಚರಣೆಯನ್ನು ಮನೆಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಕರೆನೀಡಿರುವರು. ಹೂವಿನ ಬಳಕೆಗೆ ಸಂಬಂಧಿಸಿ ಸ್ಥಳೀಯವಾದ ಲಭ್ಯ ಹೂಗಳನ್ನು ಮಾತ್ರ ಬಳಸಬೇಕು. ಆಮದು ಮಾಡಿದ ಹೂವುಗಳು ರೋಗ ಹರಡುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿದೆ.
ಸಚಿವರಾದ ಕೆ.ಕೆ.ಶೈಲಜಾ, ಇ ಚಂದ್ರಶೇಖರನ್, ಎಸಿ ಮೊಯಿದ್ದೀನ್, ಮುಖ್ಯ ಕಾರ್ಯದರ್ಶಿ ಡಾ. ವಿಶ್ವಾಸ್ ಮೆಹ್ತಾ, ರಾಜ್ಯ ಪೆÇಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಮತ್ತು ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳು ಬುಧವಾರ ಭಾಗವಹಿಸಿದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಸೋಂಕಿನ ದೃಷ್ಟಿಯಿಂದ ರಾಜ್ಯದ ಗಡಿ ಪ್ರದೇಶಗಳಲ್ಲಿ ಜಾಗರೂಕತೆಯನ್ನು ಬಲಪಡಿಸಬೇಕು. ಪರಿಣಾಮಕಾರಿ ಜಾಗೃತಿ ಅಭಿಯಾನಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಿ. ರೋಗ ಹರಡುವುದನ್ನು ತಡೆಯುವ ಪ್ರಯತ್ನಗಳು ಅಗತ್ಯ. ಈ ವಿಷಯದಲ್ಲಿ ಕೋವಿಡ್ ತಡೆಗಟ್ಟುವ ಚಟುವಟಿಕೆಗಳಿಗೆ ಇತರ ಇಲಾಖೆಗಳ ನೌಕರರನ್ನು ಗರಿಷ್ಠವಾಗಿ ಬಳಸಿಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸಿಎಂ ಹೇಳಿದರು.
ಕೆಲವು ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಏಕೆ ಹೆಚ್ಚುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು. ಮರಣ ಪ್ರಮಾಣವನ್ನು ಕಾಯ್ದುಕೊಳ್ಳಬೇಕು. ಸೋಂಕಿತ ಜನರ ಸಂಖ್ಯೆ ಹೆಚ್ಚಾದಂತೆ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಇದನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ವಾರ್ಡ್ ಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದುಳಿದಿರುವ ವಾರ್ಡ್ಗಳನ್ನು ವಿಶೇಷವಾಗಿ ಪರೀಕ್ಷಿಸಿ ಕಾರ್ಯರೂಪಕ್ಕೆ ತರಬೇಕು ಎಂದು ಸಿಎಂ ಹೇಳಿದರು.
ಓಣಂ ಆಚರಣೆಯ ಹಿನ್ನೆಲೆಯಲ್ಲಿ ಅಂಗಡಿ ಮುಗ್ಗಟ್ಟುಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳು ಕಿಕ್ಕಿರಿದು ತುಂಬುವ ಸಾಧ್ಯತೆಯಿದೆ. ಅಂತಹ ಸ್ಥಳಗಳಲ್ಲಿ ಭೌತಿಕ ದೂರವನ್ನು ಕಾಪಾಡಿಕೊಳ್ಳಬೇಕು. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಅಂಗಡಿಗಳು ತೆರೆದಿರುತ್ತವೆ. ರೋಗ ಹರಡುವ ಅಪಾಯವನ್ನು ಹೆಚ್ಚಿಸುವ ಸನ್ನಿವೇಶಗಳನ್ನು ಅನುಮತಿಸಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗಳಿಗೆ ಅವಕಾಶ ನೀಡದಂತೆ ಮುಖ್ಯಮಂತ್ರಿ ಪೆÇಲೀಸರಿಗೆ ನಿರ್ದೇಶನ ನೀಡಿದರು. ವಾರ್ಡ್ ಮಟ್ಟದ ಸಮಿತಿಯನ್ನು ಸಕ್ರಿಯಗೊಳಿಸಲು ಜನಮೈತ್ರಿ ಪೆÇಲೀಸರು ಕೈಜೋಡಿಸಬೇಕು. ಹೆಚ್ಚಿನ ಸ್ವಯಂಸೇವಕರನ್ನು ಬಳಸಲು ಚಿಂತನೆ ನಡೆಸಬೇಕು. ವಿಶೇಷ ಸ್ಥಳಗಳನ್ನು ಕ್ಲಸ್ಟರ್ಗಳಾಗಿ ಪರಿಗಣಿಸಬೇಕು ಎಂದೂ ಸಿಎಂ ಹೇಳಿರುವರು.


