HEALTH TIPS

ಕೊರೊನಾ ಹೋರಾಟ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ: ಪ್ರಧಾನಿ ಮನ್ ಕಿ ಬಾತ್!

         ನವದೆಹಲಿ: ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟ ಸರಿಯಾದ ಮಾರ್ಗದಲ್ಲಿ ನಡೆಯುತ್ತಿದೆ ಎಂದು ಹೇಳಿರುವ ಪ್ರಧಾನಿ ಮೋದಿ, ಭಾರತ ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಮೂಲಕ ಮಾರಕ ವೈರಾಣುವಿನ ಮೇಲೆ ಅಂತಿಮ ಪ್ರಹಾರ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

        ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ವಿರುದ್ಧದ ಗೆಲುವಿನ ಹಾದಿ ಸಮೀಪದಲ್ಲಿದೆ ಎಂದು ಹೇಳಿದರು.


      ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಂಶಗಳು:

  • ಕೊರೊನಾ ವೈರಸ್ ಹಾವಳಿಯ ವಿರುದ್ಧ ನಾವು ಸರಿಯಾದ ಮಾರ್ಗದಲ್ಲಿ ಹೋರಾಟ ನಡೆಸುತ್ತಿದ್ದೇವೆ.
  • ಈ ಹೋರಾಟದಲ್ಲಿ ದೇಶ ತೋರುತ್ತಿರುವ ಸಂಯಮ ನಿಜಕ್ಕೂ ಶ್ಲಾಘನೀಯ.
  • ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಭವಿಷ್ಯದ ಪೀಳಿಗೆಗೆ ಉತ್ತಮ ಹವಾಮಾನ ಒದಗಿಸುವುದು ನಮ್ಮ ಜವಾಬ್ದಾರಿಯೂ ಹೌದು.
  • ಕೃಷಿ ಉತ್ಪನ್ನಗಳ ಶೇಕಡಾವಾರು ವೃದ್ಧಿ ನಿಜಕ್ಕೂ ಸಂತಸದ ಸಂಗತಿ ಎಂದ ಪ್ರಧಾನಿ ಮೋದಿ.
  • ಭಾರತೀಯ ಮಕ್ಕಳಿಗೆ ದೇಶೀಯವಾಗಿ ಉತ್ಪಾದಿಸಿದ ಆಟಿಕೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ.
  • ಜಾಗತಿಕ ಆಟಿಕೆ ವ್ಯವಹಾರ ಸುಮಾರು 7 ಲಕ್ಷ ಕೋಟಿ ರೂ.ಗಳಾಗಿದ್ದು, ಇದರಲ್ಲಿ ಭಾರತದ ಪಾಲು ತುಂಬ ಕಡಿಮೆ ಇದೆ.
  • ಹೀಗಾಗಿ ಆಟಿಕೆ ಉದ್ಯಮಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಯೋಜನೆ ರೂಪಿಸಲಿದೆ.
  • ಪ್ರಕೃತಿ ಪೂರಕ ಆಟಿಕೆ ಸಾಮಾನುಗಳನ್ನು ತಯಾರಿಸುವುದು ನಮ್ಮ ಗುರಿಯಾಗಬೇಕು ಎಂದ ಪ್ರಧಾನಿ.
  • ಕರ್ನಾಟಕದ ಚೆನ್ನಪಟ್ಟಣ, ಆಂಧ್ರದ ಕೊಂಡಪಲ್ಲಿ, ತಮಿಳುಣಾಡಿನ ತಂಜಾವೂರು ಆಟಿಕೆ ಸಾಮಾನುಗಳು ಜಗತ್ಪ್ರಸಿದ್ಧವಾಗಿದ್ದು, ಇವುಗಳನ್ನು ಜಾಗತಿಕ ವೇದಿಕೆಗೆ ಕೊಂಡೊಯ್ಯಬೇಕಿದೆ.
  • ಕಂಪ್ಯೂಟರ್‌ ಗೇಮ್‌ಗಳನ್ನೂ ದೇಶೀಯವಾಗಿಯೇ ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ.
  • ದೇಶದ ಎಲ್ಲಾ ಕ್ಷೇತ್ರಗಳನ್ನೂ ಆತ್ಮ ನಿರ್ಭರ ಭಾರತ ಯೋಜನೆಯಡಿಯಲ್ಲಿ ತರಲು ಪ್ರಯತ್ನ ಆರಂಭವಾಗಿದೆ.
  • ಭಾರತದ ಸುರಕ್ಷತೆಯಲ್ಲಿ ಶ್ವಾನದಳದ ಪಾತ್ರ ಅತ್ಯಂತ ಮಹತ್ವವಾಗಿದ್ದು, ಶ್ವಾನದಳದ ಸೇವೆಯನ್ನು ಸದಾ ಸ್ಮರಿಸಿಕೊಳ್ಳಲಾಗುವುದು.
  • ಕರ್ನಾಟಕದ ಮುಧೋಳ ಶ್ವಾನ ತಳಿಯೂ ಸೇರಿದಂತೆ ಹಲವು ಉನ್ನತ ಶ್ವಾನ ತಳಿಗಳು ಈ ದೇಶದ ರಕ್ಷಣೆಗೆ ಟೊಂಕ ಕಟ್ಟಿ ನಿಂತಿವೆ.
  • ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ದೇಶದ ಶೈಕ್ಷಣಿಕ ಕ್ಷೇತ್ರದಲ್ಲಿ ಬಾರೀ ಬದಲಾವಣೆಯಾಗಲಿದೆ.
  • ಇದೇ ಸೆ.05ರಂದು ಶಿಕ್ಷಕರ ದಿನಾಚರಣೆಯಿದ್ದು, ಎನ್‌ಇಪಿಯ ಯಶಸ್ವಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಾಧಾನಿ ನುಡಿದರು.
  • ಮಾರಕ ಕೊರೊನಾ ವೈರಸ್ ಹಾವಳಿ ತಡೆಗಟ್ಟಲು ಕೇಂದ್ರ ಸರ್ಕಾರದ ಮಶರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮಾರಕ ವೈರಾಣುವನ್ನು ಸೋಲಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
  •     

         ಪ್ರಧಾನಿ ತಮ್ಮ 68ನೇ ಸಂಚಿಕೆಯ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಕೊರೊನಾ ವೈರಸ್ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries