HEALTH TIPS

ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣಕ್ಕೆ ಕೇಂದ್ರದ ಚಿಂತನೆ: ಆರೋಗ್ಯ ಸಚಿವ ಹರ್ಷವರ್ಧನ್

       ನವದೆಹಲಿ: ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ, ಅಧಿಕಾರ ನೀಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

          ಸೆ.13 ರಂದು ಸಂಡೇ ಸಂವಾದ್ ಕಾರ್ಯಕ್ರಮದ ಮೂಲಕ ಸಾಮಾಜಿಕ ಜಾಲತಾಣದ ಅನುಯಾಯಿಗಳೊಂದಿಗೆ ಸಂವಾದ ನಡೆಸಿದ ವೇಳೆಯಲ್ಲಿ ಹರ್ಷವರ್ಧನ್ ಈ ಘೋಷಣೆ ಮಾಡಿದ್ದಾರೆ. 

         ಕೋವಿಡ್-19 ಗೆ ಸಂಬಂಧಪಟ್ಟಂತೆ ಅತಿ ಹೆಚ್ಚು ಅಪಾಯಕಾರಿ ಸನ್ನಿವೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಾತ್ರ ಅನ್ವಯವಾಗುವಂತೆ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 

      ಸರ್ಕಾರದ ಈ ಘೋಷಣೆ ಕೋವಿಡ್-19 ಲಸಿಕೆಗಳ ಕ್ಲಿನಿಕಲ್ ಟ್ರಯಲ್ ಗಳು 3 ನೇ ಹಂತ ಮುಕ್ತಾಯಗೊಳ್ಳುವುದಕ್ಕೂ ಮುನ್ನ, ಅವುಗಳ ಫಲಿತಾಂಶವನ್ನು ವಿಶ್ಲೇಷಿಸುವುದಕ್ಕೂ ಮುನ್ನ ನಿರ್ದಿಷ್ಟ ವಿಭಾಗದ ಜನರಿಗೆ ಮಾತ್ರವೇ ನೀಡಲಾಗುವ ಸಾಧ್ಯತೆಗಳಿವೆ ಎಂಬ ಸೂಚನೆಯನ್ನು ನೀಡಿದೆ. 

      ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಈಗಾಗಲೇ ಇದೇ ಮಾದರಿಯ ಕ್ರಮವನ್ನು ಕೈಗೊಂಡಿದೆ. ಈ ಬೆನ್ನಲ್ಲೇ ಭಾರತವೂ ಸಹ ಅಮೆರಿಕ ಮಾದರಿಯನ್ನು ಅನುಸರಿಸಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಸಮಗ್ರ ಚರ್ಚೆ ಹಾಗೂ ಒಮ್ಮತಕ್ಕೆ ಬಂದ ನಂತರವಷ್ಟೇ ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣದ ಅಧಿಕೃತ ಆದೇಶ ನೀಡಲಾಗುತ್ತದೆ. ಇದನ್ನು ಔಷಧ ನಿಯಂತ್ರಕವಷ್ಟೇ ಮಾದಲು ಸಾಧ್ಯ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 





    Post a Comment

    0 Comments
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
    Qries