HEALTH TIPS

ಕಾಸರಗೋಡಲ್ಲಿ ಏಮ್ಸ್ ಸ್ಥಾಪಿಸಲು ಹಕ್ಕೊತ್ತಾಯದೊಂದಿಗೆ ಸಹಿ ಅಭಿಯಾನ-ಸುದ್ದಿಗೋಷ್ಠಿಯಲ್ಲಿ ಮಾಹಿತಿ

  

         ಕಾಸರಗೋಡು: ಏಮ್ಸ್ ಪೀಪಲ್ಸ್ ಅಲೈಯನ್ಸ್ ನೇತೃತ್ವದಲ್ಲಿ ಕಾಸರಗೋಡಲ್ಲೂ ಏಮ್ಸ್ ಆಸ್ಪತ್ರೆ ನಿರ್ಮಿಸಬೇಕೆಂದು ಒತ್ತಾಯಿಸಿ ಸೆ. 15 ರಂದು ಜಿಲ್ಲೆಯ 100 ಕೇಂದ್ರಗಳಲ್ಲಿ ಸಹಿ ಅಭಿಯಾನ ನಡೆಯಲಿದೆ. ಎರಡು ಲಕ್ಷ ಸಹಿಯನ್ನು ಸಂಗ್ರಹಿಸಿ ಮುಖ್ಯಮಂತ್ರಿಗೆ ಹಸ್ತಾಂತರಿಸಲಾಗುವುದು ಎಂದು ಸಂಘಟಕರು ನಗರದ ಪ್ರೆಸ್ ಕ್ಲಬ್‍ನಲ್ಲಿ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

      ಆರೋಗ್ಯ ರಕ್ಷಣೆಯ ವಿಷಯದಲ್ಲಿ ಕಾಸರಗೋಡು ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ. ಸಾರ್ವಜನಿಕ ಅಥವಾ ಖಾಸಗಿಯಾಗಿ ಜಿಲ್ಲೆಯಲ್ಲಿ ಒಂದೇ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೂಡ ಇಲ್ಲದ ಕಾರಣ ಕರ್ನಾಟಕ ಸರ್ಕಾರ ಲಾಕ್ ಡೌನ್ ಸಮಯದಲ್ಲಿ ಗಡಿಯನ್ನು ಮುಚ್ಚಿದಾಗ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಇಪ್ಪತ್ತು ಜೀವಗಳನ್ನು ಕಳೆದುಕೊಳ್ಳಬೇಕಾಯಿತು. ಈ ಪರಿಸ್ಥಿತಿ ಮರುಕಳಿಸದಂತೆ ತಡೆಯಲು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಪೀಪಲ್ಸ್ ಫ್ರಂಟ್ ಒತ್ತಾಯಿಸಿದೆ.

     ಕೇರಳ ಸರ್ಕಾರ ಮೊದಲು ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಲು ಮುಂದಾಗಬೇಕು. ಕೇರಳ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳಲ್ಲಿ ಕಾಸರಗೋಡು ಜಿಲ್ಲೆಯನ್ನು ಸೇರಿಸಿಕೊಂಡರೆ ಮಾತ್ರ ಕೇಂದ್ರ ಸರ್ಕಾರವು ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಮಂಜೂರು ಮಾಡಬಹುದು. ಪ್ರಸ್ತುತ ಕೇರಳ ಸರ್ಕಾರವು ಪ್ರಸ್ತಾಪಿಸಿರುವ ತಿರುವನಂತಪುರ, ಎರ್ನಾಕುಳಂ, ಕೊಟ್ಟಾಯಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳು ಚಿಕಿತ್ಸೆಯ ದೃಷ್ಟಿಯಿಂದ ರಾಜ್ಯದ ಪ್ರಮುಖ ಜಿಲ್ಲೆಗಳಾಗಿವೆ. ಆದ್ದರಿಂದ ಈ ಜಿಲ್ಲೆಗಳೊಂದಿಗೆ ಕಾಸರಗೋಡನ್ನು ಸೇರಿಸಲು ಸರ್ಕಾರ ಸಿದ್ಧವಾಗಬೇಕೆಂದು ಪೀಪಲ್ಸ್ ಫ್ರಂಟ್ ಒತ್ತಾಯಿಸಿತು.

      ಶಾಸಕ ಎನ್‍ಎ ನೆಲ್ಲಿಕುನ್ನು ಅವರು ಸೆ. 15 ರಂದು ಬೆಳಿಗ್ಗೆ 10 ಕ್ಕೆ ಹೊಸ ಬಸ್ ನಿಲ್ದಾಣ ಪ್ರದೇಶದ ಸಹಿ ಮರದ ಬಳಿ ಏಮ್ಸ್ ನ ಸಹಿ ಅಭಿಯಾನದ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರೊ.ಗೋಪಿನಾಥನ್, ಹಂಸ ಪಾಲಕ್ಕಿ, ಸುಲೇಖಾ ಮಾಹಿನ್ ಮತ್ತು ಅಂಬಲತ್ತರ ಕುಞÂ್ಞ ಕೃಷ್ಣನ್ ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries