HEALTH TIPS

ಅಂಟುರೋಗ ನಿಯಂತ್ರಣ ಕಾಯಿದೆ ಪ್ರಕಾರದ ಕೇಸುಗಳು: ಕಾಸರಗೋಡು ಜಿಲ್ಲೆಯಲ್ಲಿ ಹತ್ತು ಪಟ್ಟು ಅಧಿಕಗೊಂಡ ದಂಡ

   

    ಕಾಸರಗೋಡು: ಅಂಟುರೋಗ ನಿಯಂತ್ರಣ ಕಾಯಿದೆ ಪ್ರಕಾರ ದಾಖಲಿಸುವ ಕೇಸುಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಇನ್ನು ಮುಂದೆ(ಸೆ.7ರಿಂದ) ಹೇರಲಾಗುವ ದಂಡವನ್ನು ಹತ್ತು ಪಟ್ಟು ಅಧಿಕಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು. 

     ಸೋಮವಾರ ನಡೆದ ಐ.ಇ.ಸಿ. ಸಂಚಲನ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

       ಲಾಕ್ ಡೌನ್ ಉಲ್ಲಂಘನೆ, ಕ್ವಾರೆಂಟೈನ್ ಉಲ್ಲಂಘನೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು, ಮಾಸ್ಕ್ ಧರಿಸದೇ ಇರುವುದು, ಅಂಗಡಿಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪು ಸೇರುವುದು ಇತ್ಯಾದಿ ಆದೇಶ ಉಲ್ಲಂಘನೆಗಳಿಗೆ ಸಂಬಂಧಪಟ್ಟು ದಾಖಲಿಸುವ ಕೇಸುಗಳ ಪ್ರಕಾರದ ದಂಡಗಳಲ್ಲಿ ಈ ಪ್ರಮಾಣದಲ್ಲಿ ಹೆಚ್ಚಳಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿರುವರು. 

       ಅಂಟುರೋಗ ನಿಯಂತ್ರಣ ಕಾಯಿದೆಯನ್ನು ಕಡ್ಡಾಯವಾಗಿ ಪಾಲಿಸದೇ ಇರುವ ಕಾರಣ ಕಾಸರಗೋಡು ಜಿಲ್ಲೆಯಲ್ಲಿ ಸಾಮೂಹಿಕವಾಗಿ ಸೋಂಕು ಹೆಚ್ಚಳವುಂಟಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದವರು ತಿಳಿಸಿರುವರು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries