HEALTH TIPS

ಆಟೋ ಉದ್ಯಮ ಸುಧಾರಣೆಗಾಗಿ ಜಿಎಸ್‌ಟಿ ವಿನಾಯ್ತಿ ನೀಡಲು ಮುಂದಾದ ಕೇಂದ್ರ ಸರ್ಕಾರ

       ಮಾಹಾಮಾರಿ ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದು, ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ತುಸು ಹೆಚ್ಚಳ ಕಂಡುಬಂದಿದ್ದರೂ ಆರ್ಥಿಕ ಮುಗ್ಗಟ್ಟು ಆಟೋ ಕಂಪನಿಗಳನ್ನು ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ.

     ಸದ್ಯ ವೈರಸ್ ಭೀತಿ ಹೆಚ್ಚಳದ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ವಾಹನಗಳ ಮಾರಾಟದಲ್ಲಿ ಶೇ.15ರಿಂದ ಶೇ.40ರಷ್ಟು ಕುಸಿತ ಕಂಡುಬಂದಿದೆ. ಸದ್ಯ ವೈರಸ್ ಭೀತಿ ಹಿನ್ನಲೆಯಲ್ಲಿ ಹೊಸ ವಾಹನಗಳ ಮಾರಾಟ ಪ್ರಕ್ರಿಯೆಯು ಮುಂಬರುವ ದಿನಗಳಲ್ಲಿ ಹೆಚ್ಚಳವಾಗುವ ನೀರಿಕ್ಷೆಯಿದ್ದು, ಆಟೋ ಉದ್ಯಮ ಸುಧಾರಣೆಗಾಗಿ ತಾತ್ಕಾಲಿಕ ಪರಿಹಾರ ನೀಡುವಂತೆ ಆಟೋ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿವೆ.

    ಕರೋನಾ ಮಹಾಮಾರಿಯಿಂದಾಗಿ ಕೇವಲ ಆಟೋ ಉದ್ಯಮದಲ್ಲಿ ಮಾತ್ರವಲ್ಲ ಎಲ್ಲಾ ವಾಣಿಜ್ಯ ವಹಿವಾಟಿನಲ್ಲೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿರುವುದು ಹೊಸ ವಾಹನ ಮಾರಾಟದಲ್ಲಿ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.

       ಸದ್ಯ ತೀವ್ರ ಕುಸಿತ ಕಂಡಿರುವ ಹೊಸ ವಾಹನಗಳ ಮಾರಾಟವು ಮತ್ತೆ ಮೊದಲಿನಂತೆ ಚೇತರಿಸಿಕೊಳ್ಳಲು ತುಸು ಸಮಯಾವಕಾಶ ತೆಗೆದುಕೊಳ್ಳಲಿದ್ದು, ಆಟೋ ತಜ್ಞರ ಪ್ರಕಾರ ವಾಹನ ಮಾರಾಟವು ಮೊದಲಿನ ಸ್ಥಿತಿಗೆ ಬರಲು ಕನಿಷ್ಠ 2 ರಿಂದ 3 ವರ್ಷ ಬೇಕಾಗಬಹುದೆಂದು ಅಂದಾಜಿಸಿದ್ದಾರೆ.
     ಭಾರತೀಯ ಆಟೋ ಮೊಬೈಲ್ ಉದ್ಯಮ ಪ್ರಕ್ರಿಯೆಯನ್ನು ನಿರ್ವಹಣೆ ಮಾಡುತ್ತಿರುವ SIAM(ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್) ಸಂಘವು ಕೂಡಾ ಇದೇ ಅಂಶದ ಮೇಲೆ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಸುಧಾರಣೆಗಾಗಿ ಕೇಂದ್ರ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಸಲ್ಲಿಸಿದೆ.

         ಆಟೋ ಉತ್ಪಾದನಾ ಕಂಪನಿಗಳ ಬೇಡಿಕೆ ಕುರಿತಂತೆ ಈಗಾಗಲೇ ಭಾರತೀಯ ಕೈಗಾರಿಕಾ ಒಕ್ಕೂಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದ್ವಿಚಕ್ರ ವಾಹನಗಳ ಮೇಲಿನ ಜಿಎಸ್‌ಟಿ ಕಡಿತ ಮಾಡುವ ಕುರಿತಾಗಿ ಸುಳಿವು ನೀಡಿದ್ದರು.
     ಆದರೆ ನಿನ್ನೆಯಷ್ಟೇ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘದ 60ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಕೇಂದ್ರದ ಭಾರೀ ಕೈಗಾರಿಕಾ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ವಾಹನ ಉದ್ಯಮಕ್ಕೆ ತಾತ್ಕಲಿಕವಾಗಿ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ದ್ವಿಚಕ್ರ ಮಾತ್ರವಲ್ಲ ಎಲ್ಲಾ ಬಗೆಯ ವಾಹನಗಳ ಮೇಲೂ ಶೇ.10 ರಷ್ಟು ಜಿಎಸ್‌ಟಿ ವಿನಾಯ್ತಿ ನೀಡಬಹುದಾಗಿದೆ ಎಂಬ ಹೇಳಿಕೆ ನೀಡಿದ್ದಾರೆ.
          ಆದರೂ ಜಿಎಸ್‌ಟಿ ವಿನಾಯ್ತಿ ಕುರಿತು ಇದುವರೆಗೂ ಅಂತಿಮ ನಿರ್ಧಾರ ತಗೆದುಕೊಳ್ಳಲಾಗಿಲ್ಲ ಎನ್ನುವ ಬಗ್ಗೆ ಮಾಹಿತಿ ನೀಡಿರುವ ಸಚಿವ ಪ್ರಕಾಶ್ ಜಾವಡೇಕರ್ ಅವರು, ಆಟೋ ಉದ್ಯಮ ಸುಧಾರಣೆಗಾಗಿ ಜಿಎಸ್‌ಟಿ ವಿನಾಯ್ತಿ ನೀಡುವುದು ಸರ್ಕಾರದ ಮಟ್ಟದಲ್ಲಿ ಈಗಾಗಲೇ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries