HEALTH TIPS

ಉಕ್ಕಿನಡ್ಕದ ವೈದ್ಯಕೀಯ ಕಾಲೂಜು ಆಸ್ಪತ್ರೆಗೆ ಪುತ್ತೂರು ವಿವೇಕಾನಂದ ಕಾಲೇಜಿನ ಜೀವವರ್ಧಕ ಸಾಧನ ಕೊಡುಗೆ

  

          ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ ಅವರ ವಿಶೇಷ ಆಸ್ಥೆಯಿಂದ ನಿರ್ಮಿಸಿದ ವಿವೇಕ ಜೀವವರ್ಧಕ ಕೃತಕ ಉಸಿರಾಟದ ಸಾಧನವನ್ನು ಉಕ್ಕಿನಡ್ಕದಲ್ಲಿರುವ ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ. 

         ಕಾಲೇಜು ಉಪನ್ಯಾಸಕರಾದ ಪ್ರೊ..ಶ್ರೀಕಾಂತ್ ರಾವ್, ಪ್ರೊ..ಸುದರ್ಶನ್ ಎಂ ಎಲ್ ಮತ್ತು ಪ್ರೊ..ಅಜಿತ್.ಕೆ ಅವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಜಿತ್ ಅವರಿಗೆ ಇದನ್ನು ಹಸ್ತಾಂತರಿಸಿದರು. 

        ಅಮೇರಿಕಾದಲ್ಲಿ ನೆಲಸಿರುವ ಅನಿವಾಸಿ ಭಾರತೀಯ ಮಿತ್ರರು ಜೊತೆ ಸೇರಿ ಈ ಉಪಕರಣಕ್ಕೆ ಬೇಕಾದ ಧನಸಂಗ್ರಹಣೆಯನ್ನು ಮಾಡಿ ಈ ಕೃತಕ ಉಸಿರಾಟ ಸಾಧನವನ್ನು ಸರ್ಕಾರೀ ಆಸ್ಪತ್ರೆಗಳಿಗೆ ನೀಡುವ ಮಹತ್ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ನ್ಯೂಜೆರ್ಸಿಯ ಹೈಸ್ಕೂಲ್ ವಿದ್ಯಾರ್ಥಿಗಳಾದ ಭಕ್ತಿ ಹೆಗಡೆ, ಅನನ್ಯ ಭಟ್ ಮತ್ತು ಪ್ರಣವ ಜೋಷಿ ಇವರು ಆನ್ಲೈನ್ ಮೂಲಕ ಲಘು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವನ್ನು ನಡೆಸಿ ಧನ ಸಂಗ್ರಹಕ್ಕೆ ಚಾಲನೆ ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries