HEALTH TIPS

ಸೂಚಿಸಿದ ಸ್ಥಳದಲ್ಲಿ 15 ದಿನದೊಳಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

             ನವದೆಹಲಿ: ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ವರ್ಗಾವಣೆಯಲ್ಲಿ ತೋರಿರುವ ಹೊಸ ಹುದ್ದೆಗಳಲ್ಲಿ ಇಬ್ಬರೂ 15 ದಿನಗಳ ಒಳಗಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಮಂಗಳವಾರ ಸೂಚಿಸಿದೆ.

        ಕರ್ನಲ್ ಅಮಿತ್‍ಕುಮಾರ್ ಅವರು ಸೇನೆಯ ಜಡ್ಜ್ ಅಡ್ವೋಕೇಟ್ ಜನರಲ್ (ಜೆಎಜಿ) ವಿಭಾಗದಲ್ಲಿ ಅಧಿಕಾರಿಯಾಗಿದ್ದಾರೆ. ಪತ್ನಿಯೂ ಸೇನಾಧಿಕಾರಿಯಾಗಿದ್ದು, ಇಬ್ಬರೂ ಜೋಧಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕರ್ನಲ್ ಅಮಿತ್‍ಕುಮಾರ್ ಅವರನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ, ಕರ್ನಲ್ ಹುದ್ದೆಗೆ ಬಡ್ತಿ ಪಡೆಯಲಿರುವ ಪತ್ನಿಯನ್ನು ಪಂಜಾಬ್‍ನ ಭಟಿಂಡಾಕ್ಕೆ ವರ್ಗಾವಣೆ ಮಾಡಲಾಗಿದೆ. ತಮ್ಮ ಈ ವರ್ಗಾವಣೆಯನ್ನು ಪ್ರಶ್ನಿಸಿ, ದಂಪತಿ ಹೈಕೋರ್ಟ್ ಮೊರೆ ಹೋಗಿದ್ದರು.

       ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ರಾಜೀವ್ ಸಹಾಯ್ ಎಂಡ್ಲಾ ಹಾಗೂ ಆಶಾ ಮೆನನ್ ಅವರಿರುವ ನ್ಯಾಯಪೀಠ, 'ಇಬ್ಬರನ್ನೂ ಒಂದೇ ಸ್ಥಳಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿ ಅಮಿತ್‍ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲು ಸೇನೆ ಸೂಕ್ತ ಕಾರಣಗಳನ್ನು ನೀಡಿದೆ. ಕೋರ್ಟ್ ಮಧ್ಯಪ್ರವೇಶಿಸಬಹುದಾದಂತಹ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ' ಎಂದು ಅಭಿಪ್ರಾಯಪಟ್ಟಿತು.

          ಒಂದೇ ಸ್ಥಳಕ್ಕೆ ವರ್ಗಾಯಿಸುವಂತೆ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ನಾಲ್ಕು ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸೇನೆಗೆ ಸೂಚಿಸಿ ನ್ಯಾಯಪೀಠ ಸೆ. 15ರಂದು ಆದೇಶ ಹೊರಡಿಸಿತ್ತು. ಅಲ್ಲದೇ, ಅಮಿತ್‍ಕುಮಾರ್ ದಂಪತಿ ಹೊಸ ಹುದ್ದೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವುದಕ್ಕೆ ಅ. 20ರ ವರೆಗೆ ತಡೆಯಾಜ್ಞೆಯನ್ನೂ ನೀಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries