ತಿರುವನಂತಪುರ: ರಾಜ್ಯದಲ್ಲಿ ಶಾಲೆ ಪುನರಾರಂಭಿಸಲು ಕಾಲ ಪಕ್ವವಾಗಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಶಾಲೆಗಳಿಗಾಗಿ ನಿರ್ಮಿಸಲಾದ ಹೈಟೆಕ್ ಕೊಠಡಿಗಳು ಹಾಗೂ ಲ್ಯಾಬ್ ವ್ಯವಸ್ಥೆಯನ್ನು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ತಿರುವನಂತಪುರದಲ್ಲಿ ಉದ್ಘಾಟಿಸಿ ಮಾತನಾಡಿದರು.
ಕೋವಿಡ್-19 ರೋಗ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಲಾತರಗತಿ ತೆರೆದು ಕಾರ್ಯಾಚರಿಸಲು ಸ್ವಲ್ಪಕಾಲ ಕಾಯಬೇಕಾಗಿದೆ. ಶಾಲಾ ಕಾಲೇಜು ತೆರೆದು ಕಾರ್ಯಾಚರಿಸದಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗದಿರಲು ಆನ್ಲೈನ್ ತರಗತಿಯನ್ನು ಆರಂಭಿಸಲಾಗಿದೆ. ಶಾಲಾ ಕೊಠಡಿಗಳನ್ನು ಹೈಟೆಕ್ಗೊಳಿಸುವುದರ ಜತೆಗೆ ಲ್ಯಾಬ್ಗಳನ್ನು ಮೇಲ್ದರ್ಜೆಗೇರಿಸುವುದರಿಂದ ಮುಂದಿನ ಪೀಳಿಗೆಗೆ ಉಪಕಾರಪ್ರದವಾಗಲಿರುವುದಾಗಿ ತಿಳಿಸಿದರು.


